Advertisement

ಪುಂಜಾಲಕಟ್ಟೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಅಪಘಾತ

06:01 PM Oct 22, 2022 | Team Udayavani |

ಪುಂಜಾಲಕಟ್ಟೆ: ಇಲ್ಲಿನ ಶ್ರೀ ರಾಮ ನಗರ ಪ್ರಗತಿ ಹಾರ್ಡ್ ವೇರ್ ಬಳಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಲಾರಿ ಮತ್ತು ಪಿಕಪ್ ಢಿಕ್ಕಿ ಯಾದ ಘಟನೆ ಶನಿವಾರ ಸಂಜೆ ಸಂಭವಿಸಿದೆ.

Advertisement

ಘಟನೆಯಲ್ಲಿ ಪಿಕಪ್ ಚಾಲಕ ಮದ್ದಡ್ಕದ ರಾಘವೇಂದ್ರ ಅವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.ಗಾಯಗೊಂಡಿರುವ ಅವರು ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ಇದೇ ಜಾಗದಲ್ಲಿ ಅ.18ರಂದು ಪಿಕಪ್ ಹಾಗೂ ಮಿನಿ ಲಾರಿ ಢಿಕ್ಕಿಯಾಗಿ ಓರ್ವರು ಸಾವನ್ನಪ್ಪಿದ್ದರು. ರಾಷ್ಟ್ರೀಯ ಹೆದ್ದಾರಿ ಯಲ್ಲಿ ಪದೇ ಪದೇ ಅಪಘಾತ ನಡೆಯುತ್ತಿದ್ದು, ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next