Advertisement

Punjalakatte: ಹಣ ದುಪ್ಪಟ್ಟು ಆ್ಯಪ್ ನಿಂದ ಮೋಸ; ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

05:13 PM Dec 24, 2023 | Team Udayavani |

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದ್ದು ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಆತ್ಮಹತ್ಯೆಗೈದವರು.

ಅವರು ಶನಿವಾರ ರಾತ್ರಿ 9 ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ಹೊರಟು ಬಳಿಕ ನಾಪತ್ತೆ ಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆ ಮೇಲೆ ಇವರ ದ್ವಿಚಕ್ರ ವಾಹನ ಮಾತ್ರ ದೊರೆತಿದ್ದು, ಅಗ್ನಿಶಾಮಕದಳ ಆಗಮಿಸಿ ಹುಡುಕಾಡಿದ್ದರು. ಕಳೆದ ಏಳು ವರ್ಷಗಳ ಹಿಂದೆ ನಿರ್ಮಾಣಗೊಂಡ ಬಹುಗ್ರಾಮ ಕುಡಿಯುವ ನೀರಿನ ಅಣೆಕಟ್ಟೆ ಬಳಿ ರವಿವಾರ ಮೃತದೇಹ ಪತ್ತೆಯಾಗಿದೆ.

ಆರ್ಥಿಕ ಸಂಕಷ್ಟ: ಇತ್ತೀಚೆಗಷ್ಟೇ ಹಣ ದುಪ್ಪಟ್ಟುಗೊಳಿಸುವ ಆ್ಯಪ್ ವೊಂದರಲ್ಲಿ 21 ಲಕ್ಷ ರೂ. ಮೊತ್ತದ ಹಣ ಕಳೆದುಕೊಂಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಗೆ ಅವರು ದೂರು ಸಲ್ಲಿಸಿದ್ದರು. ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ಅವರು ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು.

ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಮೂಡಿಸಿದೆ.

Advertisement

ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್ ಐ ಭಾರತಿ ನೇತೃತ್ವದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next