Advertisement

ನಿಯಮ ಪಾಲಿಸದವರಿಗೆ ಗುಲಾಬಿ

07:49 AM Feb 09, 2019 | Team Udayavani |

ಪುಂಜಾಲಕಟ್ಟೆ: ದ.ಕ. ಜಿಲ್ಲಾ ಪೊಲೀಸ್‌ ಇಲಾಖಾ ವತಿಯಿಂದ ನಡೆ ಯುತ್ತಿರುವ ರಸ್ತೆ ಸುರಕ್ಷಾ ಸಪ್ತಾಹ 2019ರನ್ವಯ ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವತಿಯಿಂದ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷಾ ಕಾರ್ಯಕ್ರಮ ಜರಗಿತು.

Advertisement

ಜಾಥಾ
ಪುಂಜಾಲಕಟ್ಟೆ-ಮಡಂತ್ಯಾರು ಪೇಟೆ ಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಥಾ ನಡೆಸಲಾಯಿತು. ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು. ರಸ್ತೆ ಸುರಕ್ಷತಾ ಕ್ರಮಗಳನ್ನು ಮತ್ತು ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ರಸ್ತೆ ಸುರಕ್ಷತೆ ನಿಯಮಗಳ ಬಗ್ಗೆ ಅರಿವು ಮೂಡಿಸಿ ಮುನ್ನೆಚ್ಚರಿಕೆ ನೀಡಲಾಯಿತು. ಠಾಣಾ ಎಸ್ಸೈ ಸೌಮ್ಯಾ ಮತ್ತು ಸಿಬಂದಿ ವರ್ಗ, ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷ ಗೋಪಾಲಕೃಷ್ಣ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next