Advertisement

ಪುಂಜಾಲಕಟ್ಟೆ ಗೂಡ್ಸ್ ಟೆಂಪೊ- ಪಿಕಪ್ ಢಿಕ್ಕಿ ಪ್ರಕರಣ: ಚಿಕಿತ್ಸೆ ಫಲಿಸದೆ ಪಿಕಪ್ ಚಾಲಕ ಸಾವು

09:33 AM Oct 18, 2022 | Team Udayavani |

ಪುಂಜಾಲಕಟ್ಟೆ: ಇಲ್ಲಿನ ಶ್ರೀ ರಾಮನಗರ ಪ್ರಗತಿ ಹಾರ್ಡ್ ವೇರ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಕಪ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಪಾಂಡವರಕಲ್ಲು ಕುದ್ರು ನಿವಾಸಿ ಇಬ್ರಾಹಿಂ ಅವರ ಪುತ್ರ ಸಾಹಿಲ್ (21) ಮೃತಪಟ್ಟ ದುರ್ದೈವಿ.

ಗೂಡ್ಸ್ ಟೆಂಪೊ ಹಾಗೂ ಪಿಕಪ್ ನಡುವೆ ನಡೆದ ಅಪಘಾತದಲ್ಲಿ ಪಿಕಪ್ ನಲ್ಲಿದ್ದ ಸಾಹಿಲ್ ಹಾಗೂ ಅವಿನಾಶ್ ಮತ್ತು ಮಿನಿ ಲಾರಿ ಚಾಲಕ ಧೀರಜ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆ ಗೆ ದಾಖಲಾಗಿದ್ದರು.

ಇದನ್ನೂ ಓದಿ:ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ನೂತನ ನಾಯಕನ ನೇಮಕ; ವಾರ್ನರ್ ಗೆ ತಪ್ಪಿದ ಚಾನ್ಸ್

ಆದರೆ ತಲೆ ಮತ್ತು ಎದೆಗೆ ಏಟಾಗಿದ್ದ ಸಾಹಿಲ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಕೊನೆಯುಸಿರೆಳೆದಿದ್ದರು.

Advertisement

ಇಬ್ರಾಹಿಂ ಅವರ ನಾಲ್ವರು ಮಕ್ಕಳಲ್ಲಿ ಸಾಹಿಲ್ ಕೊನೆಯವರು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪದವಿ ವಿದ್ಯಾರ್ಥಿಯಾಗಿದ್ದು ಬಿಡುವಿನ ವೇಳೆಯಲ್ಲಿ ಚಾಲಕರಾಗಿ ದುಡಿಯುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಮೂವರು ಸಹೋದರಿಯರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next