Advertisement

Punjalkatte ವಿದ್ಯಾರ್ಥಿಗೆ ಎಸ್‌ಡಿಎಂಸಿ ಅಧ್ಯಕ್ಷನಿಂದ ಹಲ್ಲೆ

11:21 PM Dec 01, 2023 | Team Udayavani |

ಪುಂಜಾಲಕಟ್ಟೆ: ಶಾಲಾ ಬಾಲಕನೋರ್ವ ಸೈಕಲ್‌ ಕಳ್ಳತನ ಮಾಡಿ ಮಾರಾಟ ಮಾಡಿರುವುದಾಗಿ ಆರೋಪಿಸಿ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ, ಬಾಲಕನಿಗೆ ಹಲ್ಲೆಗೈದಿದ್ದು, ಬಾಲಕ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನ. 30ರಂದು ಸಂಭವಿಸಿದೆ.

Advertisement

ಬಾಲಕ ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಬಾಲಕನು ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನ. 28ರಂದು ಬೆಳಗ್ಗೆ ಶಾಲೆಯಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಆರೋಪಿತ ಪರಮೇಶ, ಬಾಲಕನನ್ನು ವಿಚಾರಿಸಿ ಬಾಲಕನ ತಾಯಿಯ ಸಮಕ್ಷಮದಲ್ಲಿ ಬಾಲಕನಿಗೆ ಸಣ್ಣ ದೊಣ್ಣೆಯಿಂದ ಹಾಗೂ ಕೈಯಿಂದ ಹೊಡೆದಿದ್ದಾನೆ. ಈ ವೇಳೆ ಶಾಲಾ ಶಿಕ್ಷಕರಾದ ಪ್ರಮೀಳಾ ಮತ್ತು ರಮೇಶ್‌ ಅವರು ಬಾಲಕನಿಗೆ ಹೊಡೆಯಲು ಪ್ರೇರೇಪಿಸಿದ್ದರು ಎಂದು ದೂರಲಾಗಿದೆ.

ಹಲ್ಲೆ ನಡೆಸಿದ ಬಳಿಕ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಸೈಕಲ್‌ ಕದ್ದು ಮಾರಾಟ ಮಾಡಿದ ಬಗ್ಗೆ ಕೇಸು ಹಾಕುವುದಾಗಿ ಬೆದರಿಕೆ ಹಾಕಿದ್ದು, ಶಾಲೆಯಲ್ಲಿ ನಡೆದ ಹಲ್ಲೆಯಿಂದ ನ. 30ರಂದು ಬೆಳಗ್ಗೆ ಬಾಲಕನಿಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಬಾಲಕ ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next