Advertisement

Punjalkatte: ಹೃದಯಾಘಾತದಿಂದ ಯುವತಿ ಸಾವು

05:44 PM Aug 30, 2023 | Team Udayavani |

ಪುಂಜಾಲಕಟ್ಟೆ: ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ಸಂಭವಿಸಿದೆ.

Advertisement

ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ.

ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್‌ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದರು. ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ.

ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ತಿಳಿಸಿದ್ದಾರೆ.

ನಂತರ ಮೃತ ದೇಹವನ್ನು ಹೆಚ್ಚಿನ ಪರೀಕ್ಷೆಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಸಾಗಿಸಲಾಗಿತ್ತು.

Advertisement

ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

ಮಿತ್ರಾ ಅವರು ಪದವೀಧರೆಯಾಗಿದ್ದು, ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next