Advertisement

Puri ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಸಾವು 2ಕ್ಕೇರಿಕೆ

12:07 AM Jul 09, 2024 | Team Udayavani |

ಪುರಿ: ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆ ವೇಳೆ ರವಿವಾರ ನಡೆದ ನೂಕುನುಗ್ಗಲಿನಿಂದ ಮೃತಪಟ್ಟವರ ಸಂಖ್ಯೆ ಸೋಮವಾರ 2ಕ್ಕೇರಿದೆ. ಘಟನೆಯಲ್ಲಿ 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರವಿವಾರವಷ್ಟೇ ಒಬ್ಬ ವ್ಯಕ್ತಿ ರಥ ಚಕ್ರದ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದರು. ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಗಂಭೀರ ಸ್ಥಿತಿಗೆ ತಲುಪಿದ್ದ ಬೊಲಂಗಿರ್‌ ಜಿಲ್ಲೆಯ ನಿವಾಸಿಯೊಬ್ಬರು ಸೋಮವಾರ ಕೊನೆಯುಸಿರೆಳೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next