Advertisement

ನಾಳೆಯಿಂದ ಪುಷ್ಪಗಿರಿ ಉತ್ಸವ ಆರಂಭ

12:12 PM Jan 03, 2020 | Team Udayavani |

ಹಾಸನ: ಹಳೆಬೀಡು ಸಮೀಪದ ಪುಷ್ಪಗಿರಿ ಬೆಟ್ಟದ ಬಯಲು ರಂಗಮಂದಿರದಲ್ಲಿ ಪುಷ್ಪಗಿರಿ ರಾಷ್ಟ್ರೀಯ ಉತ್ಸವ ಹಾಗೂ ಶ್ರೀ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಯೋಜನೆ ಲೋಕಾರ್ಪಣೆ ಸಮಾರಂಭ ಜ.4 ರಂದು ಮಧ್ಯಾಹ್ನ 2 ಗಂಟೆಗೆ ಹಳೇಬೀಡಿನ ಪುಷ್ಪಗಿರಿ ಯಲ್ಲಿ ನಡೆಯಲಿದೆ ಎಂದು ಪುಷ್ಪಗಿರಿ ಮಹಾಸಂಸ್ಥಾನದ ಕಾರ್ಯದರ್ಶಿ ಎಚ್‌.ಎಸ್‌. ರಾಜಶೇಖರ್‌ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಚಿತ್ರ ನಟ ಪುನಿತ್‌ ರಾಜ್‌ಕುಮಾರ್‌ ಉತ್ಸವಕ್ಕೆ ಚಾಲನೆ ನೀಡುವರು. ಶಾಸಕ ಲಿಂಗೇಶ್‌, ಸಚಿವರಾದ ಜಗದೀಶ್‌ ಶೆಟ್ಟರ್‌, ಕೆ.ಎಸ್‌. ಈಶ್ವರಪ್ಪ ಪಾಲ್ಗೊಳ್ಳುವರು ಎಂದರು. ಜ.5ರಂದು ಸಂಜೆ 6 ಗಂಟೆಗೆ ಪುಷ್ಪಗಿರಿ ಮಠದ ಡಾ. ಸೋಮಶೇಖರ ಸ್ವಾಮೀಜಿ ಪಟ್ಟಾಭಿಷೇಕ ದಶಮಾನೋತ್ಸವ ಸಮಾರಂಭ ನಡೆಯಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಎಂ.ಬಿ. ಪಾಟೀಲ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಂದು ರಾತ್ರಿ 9 ಗಂಟೆಗೆ ಸೋಮಶೇಖರ ಶಿವಾಚಾರ್ಯರ ನೇತೃತ್ವದಲ್ಲಿ ನೀರಾವರಿ ಸಂಭ್ರಮಾಚರಣೆ ನಡೆಯಲಿದೆ. ನೀರಾವರಿ ಹೋರಾಟದಲ್ಲಿ ಪಾಲ್ಗೊಂಡ ರೈತ ಸಂಘದ ಮುಖಂಡ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next