Advertisement

ಬೆಳಗಾವಿಯಲ್ಲಿ ಡಾ.‌ಪ್ರಭಾಕರ ಕೋರೆಗೆ ಪುಸ್ತಕ-ಗ್ರಂಥಗಳ ತುಲಾಭಾರ

04:37 PM Oct 15, 2022 | Team Udayavani |

ಬೆಳಗಾವಿ: ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.‌ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಪುಸ್ತಕ ಹಾಗೂ ಗ್ರಂಥಗಳ ವಿಶೇಷ ತುಲಾಭಾರ ನೆರವೇರಿಸಲಾಯಿತು.

Advertisement

ಡಾ.‌ಪ್ರಭಾಕರ ಕೋರೆ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಡಾ.‌ಪ್ರಮೋದ್ ಸಾವಂತ, ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಧರ್ಮೆಂದ್ರ ಪ್ರಧಾನ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಮಾಜಿ‌ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಸೇರಿದಂತೆ ರಾಜ್ಯದ ಹಲವು ನಾಯಕರು ಗೌರವ ಸಮ್ಮಾನ ಮಾಡಿದರು.

ಇದನ್ನೂ ಓದಿ:ಹಿಂದಿಗೆ ಡಬ್ ಆದ ‘ಕಾಂತಾರ’ ಮೊದಲ ದಿನ ಗಳಿಸಿದ್ದೆಷ್ಟು? ಗಾಡ್ ಫಾದರ್ ಮೀರಿಸಿದ ರಿಷಬ್ ಸಿನಿಮಾ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಶಿಕ್ಷಣ ಸಚಿವ ಬಿ.ಸಿ. ನಾಗೇಶ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ  ಪೂಜಾರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next