Advertisement

ಜನರ ಸುರಕ್ಷಗೆ ಮೊದಲ ಆದ್ಯತೆ ನೀಡಿ: ಮೆಸ್ಕಾಂ ಎಂ.ಡಿ. ಪದ್ಮಾವತಿ

02:48 PM Jun 27, 2024 | Team Udayavani |

ಮಹಾನಗರ: ರಾಷ್ಟ್ರೀಯ ವಿದ್ಯುತ್‌ ಸುರಕ್ಷತಾ ಸಪ್ತಾಹದ ಅಂಗವಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ಹಾಗೂ ವಿದ್ಯುತ್‌ ಪರಿವೀಕ್ಷಣಾ ಇಲಾಖೆ ಸಹಯೋಗದೊಂದಿಗೆ ಬುಧವಾರ ಸುರಕ್ಷ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

Advertisement

ನಗರದ ಬಿಜೈಯಲ್ಲಿರುವ ಮೆಸ್ಕಾಂ ಕಾರ್ಪೋರೆಟ್‌ ಕಚೇರಿ ಆವರಣದಲ್ಲಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಿ. ಪದ್ಮಾವತಿ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮೆಸ್ಕಾಂ ನೌಕರರು  ಕಂಪೆನಿಯ ಹಿತ, ಗ್ರಾಹಕರ ತೃಪ್ತಿಯನ್ನು ಗಮನದಲ್ಲಿಟ್ಟು ಕೊಂಡು ಕೆಲಸ ಮಾಡುವುದರ ಜತೆಗೆ ಸುರಕ್ಷೆಗೆ ಮೊದಲ ಪ್ರಾಶಸ್ತ್ಯ ನೀಡಬೇಕಾಗಿದೆ. ಕಂಪೆನಿಯ
ವತಿಯಿಂದ ತಮಗೆ ನೀಡಿರುವ ಸುರಕ್ಷೆ ಸಾಮಗ್ರಿಗಳನ್ನು ಕರ್ತವ್ಯದ ಅವಧಿಯಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಿ ಎಂದರು.

ಮೆಸ್ಕಾಂ ತಾಂತ್ರಿಕ ನಿರ್ದೇಶಕ ಎಚ್‌. ಜಿ. ರಮೇಶ್‌, ಉಪಮುಖ್ಯ ವಿದ್ಯುತ್‌ ಪರಿವೀಕ್ಷಕ ಕೆ.ಎಂ. ಕಾಂತರಾಜು, ಮುಖ್ಯ ಎಂಜಿನಿಯರ್‌ ಪುಷ್ಪಾ, ಮುಖ್ಯ ಆರ್ಥಿಕ ಅಧಿಕಾರಿ ಮೌರಿಸ್‌ ಡಿ’ಸೋಜಾ, ಆರ್ಥಿಕ ಸಲಹೆಗಾರ ಬಿ. ಹರಿಶ್ಚಂದ್ರ, ಅಧೀಕ್ಷಕ ಎಂಜಿನಿಯರ್‌ ಕೃಷ್ಣರಾಜ್‌, ಕಾರ್ಯನಿರ್ವಾಹಕ ಎಂಜಿ ನಿಯರ್‌ ಲೋಹಿತ್‌, ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ, ಮಾನ್ಯತೆ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಸಿಬಂದಿ ಪಾಲ್ಗೊಂಡಿದ್ದರು.

ವಾರ ಕಾಲ ಅಭಿಯಾನ
ಮಂಗಳೂರು ವಿಭಾಗ ವ್ಯಾಪ್ತಿಯ ಪವರ್‌ಮನ್‌ಗಳ ಜಾಥಾವು ಬಿಜೈಯಿಂದ ಬಲ್ಲಾಳ್‌ಬಾಗ್‌, ಲೇಡಿಹಿಲ್‌ ಮೂಲಕ ಸಾಗಿತು. ಸುರಕ್ಷೆಯ ಬಗ್ಗೆ ಭಿತ್ತಿ ಪತ್ರಗಳನ್ನು ಪ್ರದರ್ಶಿಸಲಾಯಿತು. ವಿದ್ಯುತ್‌ ಸುರಕ್ಷೆ ಜಾಗೃತಿ ಕಾರ್ಯ ಕ್ರಮದ ಅಂಗವಾಗಿ ಮೆಸ್ಕಾಂ ವ್ಯಾಪ್ತಿ ಯಲ್ಲಿ ಮುಂದಿನ 1 ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next