Advertisement

ಕೊಡಗಿನ ಬಾಳೆಲೆಯಲ್ಲಿ “ಪುತ್ತರಿ’ ಸಂಭ್ರಮ

12:39 AM Nov 28, 2023 | Team Udayavani |

ಮಡಿಕೇರಿ: ವಿಶಿಷ್ಟ ಸಂಸ್ಕೃತಿಯ ಕೊಡವ ಜನಾಂಗದ ಪ್ರಧಾನ ಹಬ್ಬಗಳಲ್ಲಿ ಒಂದಾದ ಪುತ್ತರಿಯನ್ನು ಕೊಡವ ನ್ಯಾಶನಲ್‌ ಕೌನ್ಸಿಲ್‌ ಸಂಘಟನೆ ದಕ್ಷಿಣ ಕೊಡಗಿನ ಬಾಳೆಲೆ ಬಳಿಯ ಆರ್ಕೇರಿ ನಾಡಿನ ಬಿಳೂರು ಗ್ರಾಮದಲ್ಲಿ ಸಂಭ್ರಮದಿಂದ ಆಚರಿಸಿತು.

Advertisement

ಹುಣ್ಣಿಮೆಯ ದಿನವಾದ ಸೋಮವಾರ ಬೆಳಗ್ಗೆ ಬಿಳೂರು ಗ್ರಾಮದ ಕಾಂಡೇರ ಸುರೇಶ್‌ ಅವರ ಭತ್ತದ ಗದ್ದೆಯಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್‌.ಯು. ನಾಚಪ್ಪ ಸಾಂಪ್ರದಾಯಿಕವಾಗಿ ನವಧಾನ್ಯ ಭತ್ತದ ಕದಿರು ಕೊಯ್ಯುವ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು.

ತೆನೆ ತುಂಬಿದ ಕದಿರುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಪ್ರಕೃತಿ ದೇವಿಗೆ ನಮಿಸಿದರು. ಗಾಳಿಯಲ್ಲಿ ಗುಂಡು ಹಾರಿಸಿ ಪುತ್ತರಿಯ ಆಚಾರ, ವಿಚಾರಗಳನ್ನು ಆರಂಭಿಸಿದರು. ಕೊçದ ಕದಿರನ್ನು “ಪೊಲಿಯೇ ಬಾ, ಪೊಲಿ ಪೊಲಿಯೇ ಬಾ’ ಎಂದು ಧಾನ್ಯಲಕ್ಷ್ಮೀಯನ್ನು ಘೋಷವಾಕ್ಯದ ಮೂಲಕ ಆಹ್ವಾನಿಸುತ್ತಾ ಮನೆ ತುಂಬಿಕೊಂಡರು. ಅನಂತರ ನವಧಾನ್ಯಕ್ಕೆ ವಿಶೇಷ ಪೂಜೆ ಸಲ್ಲಿಸಿ ಕೊಡವ ಜನಾಂಗ ಹಾಗೂ ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next