Advertisement

Udupi: ಪುತ್ತಿಗೆ ಶ್ರೀಗಳ ಪರ್ಯಾಯ- ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರಿಗೆ ಆಹ್ವಾನ

12:23 AM Dec 15, 2023 | Team Udayavani |

ಉಡುಪಿ: ಶ್ರೀ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕರ ಸಹಿತವಾಗಿ ವಿವಿಧ
ಪ್ರಮುಖರಿಗೆ ಪರ್ಯಾಯ ಸ್ವಾಗತ ಸಮಿತಿ ವತಿಯಿಂದ ಬೆಳಗಾವಿಯಲ್ಲಿ ಆಮಂತ್ರಣ ಪತ್ರ ನೀಡಲಾಯಿತು.

Advertisement

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷದ ನಾಯಕ ಆರ್‌. ಅಶೋಕ್‌, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹಿತ ಪ್ರಮುಖರಿಗೆ ಆಮಂತ್ರಣ ಪತ್ರಿಕೆ ನೀಡಲಾಯಿತು.
ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ಗುರುರಾಜ್‌ ಗಂಟಿಹೊಳೆ, ಸುನಿಲ್‌ ಕುಮಾರ್‌, ಕಿರಣ್‌ ಕೊಡ್ಗಿ ಹಾಗೂ ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್‌ ನೇತೃತ್ವದ ನಿಯೋಗದಲ್ಲಿ ಸಮಿತಿ ಸಂಚಾಲಕ ಸಂತೋಷ್‌ ಪಿ. ಶೆಟ್ಟಿ ತೆಂಕರಗುತ್ತು, ಶರತ್‌ ಹೆಗ್ಡೆ ಬೆಳ್ಮಣ್‌, ಪ್ರವೀಣ್‌ ಶೆಟ್ಟಿ ಕಪ್ಪೆಟ್ಟು, ಕಿಶೋರ್‌ ಕುಮಾರ್‌ ಗುರ್ಮೆ, ಜಿ. ಎಸ್‌. ಕುಮಾರ ಗೌಡ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next