Advertisement

ಪುತ್ತೂರು: ನೀರಿನ ಟ್ಯಾಂಕ್‌ಗೆ ಬಿದ್ದು 3 ಮಕ್ಕಳು ಸಾವು

09:23 AM Apr 05, 2019 | Team Udayavani |

ಪುತ್ತೂರು: ನೀರಿನ ಟ್ಯಾಂಕಿಗೆ ಬಿದ್ದು ಮೂರೂ ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪಾಣಜೆ ಬಳಿಯ ಅರ್ಲ ಪದವಿನ ಉಡ್ಡ೦ಗಳ ಎಂಬಲ್ಲಿ  ಬುಧವಾರ ಸಂಜೆ ಸಂಭವಿಸಿದೆ.

Advertisement

ಸಾವಿಗೀಡಾದ ಮಕ್ಕಳನ್ನು ವಿಶ್ಮಿತಾ(13) ,ಚೈತ್ರಾ (10)ಹಾಗೂ ಜಿತೇಶ್ (13) ಎಂದು ಗುರುತಿಸಲಾಗಿದೆ . ಮೃತಪಟ್ಟ ಮಕ್ಕಳೆಲ್ಲಾ ಬೆಟ್ಟಂಪಾಡಿಯ ಮಿತ್ತಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳು . ಇಂದು ಶಾಲೆಗೆ ರಜೆಯಿದ್ದ ಕಾರಣ ಆಟವಾಡಲು ತೆರಳಿದ್ದರು ,ಆಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.


Advertisement

Udayavani is now on Telegram. Click here to join our channel and stay updated with the latest news.

Next