Advertisement

Puttur: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಸಾವು

11:44 PM Sep 23, 2023 | Team Udayavani |

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟ ಘಟನೆ ಶನಿವಾರ ಕೆಯ್ಯೂರಿನಲ್ಲಿ ಸಂಭವಿಸಿದೆ.

Advertisement

ಮುಹಮ್ಮದ್‌ ಅದಿಲ್‌ (5) ಮೃತಪಟ್ಟ ಬಾಲಕ. ಕೆಯ್ಯೂರು ನಿವಾಸಿ ಹಾರೀಸ್‌ ದಾರಿಮಿ ಅವರ ಪುತ್ರ ಕೆಯ್ಯೂರು ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಯುಕೆಜಿ ವಿದ್ಯಾರ್ಥಿ ಮೊಹಮ್ಮದ್‌ ಸಂಜೆ ಶಾಲಾ ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡ ಬಾಲಕನನ್ನು ತತ್‌ಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next