Advertisement

Puttur: ಧರೆಗೆ ಉರುಳಿದ ಮಾವಿನ ಮರ

01:25 AM Apr 28, 2024 | Team Udayavani |

ಪುತ್ತೂರು: ಪುತ್ತೂರು ಬೊಳುವಾರು ಬಸ್‌ ಪ್ರಯಾಣಿಕರ ತಂಗುದಾಣದ ಪಕ್ಕದಲ್ಲಿದ್ದ ಭಾರೀ ಗಾತ್ರದ ಮಾವಿನ ಮರವೊಂದು ಧರಶಾಯಿಯಾದ ಘಟನೆ ಶನಿವಾರ ಸಂಭವಿಸಿದೆ.

Advertisement

ಬಿದ್ದ ಮರದಲ್ಲಿದ್ದ ಮಾವಿನ ಕಾಯಿಗಳನ್ನು ಕೊಯ್ಯಲು ಜನ ಮುಗಿ ಬಿದ್ದ ಘಟನೆ ನಡೆಯಿತು. ಸದಾ ಜನರ ಸಂಪರ್ಕದಲ್ಲಿರುವ ಈ ಸ್ಥಳದಲ್ಲಿ ಮರ ಬಿದ್ದ ಸಂದರ್ಭ ಯಾರೂ ಇಲ್ಲದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮರದ ಪಕ್ಕದಲ್ಲೇ ನಿಲ್ಲಿಸಲಾಗಿದ್ದ ಒಂದು ಟೆಂಪೋ ಮತ್ತು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಮಾವಿನ ಮರ ತುಂಬಾ ಮಾವಿನ ಕಾಯಿ ತುಂಬಿದ್ದರಿಂದ ಜನರೆಲ್ಲರೂ ಮಾವಿನ ಕಾಯಿ ತೆಗೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next