Advertisement

Puttur: ನಿಷೇಧಿತ ಕೇರಳ ಲಾಟರಿ ಮಾರಾಟ; ವ್ಯಕ್ತಿಯ ಸೆರೆ

08:04 PM Apr 02, 2024 | Team Udayavani |

ಪುತ್ತೂರು: ಕೇರಳ ರಾಜ್ಯ ಲಾಟರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

Advertisement

ಪಟ್ನೂರು ನಿವಾಸಿ ಲಕ್ಷ್ಮಣ ಬಂಧಿತ ವ್ಯಕ್ತಿ.

ಎ. 1ರಂದು ಮಧ್ಯಾಹ್ನ ಪುತ್ತೂರಿನ ಬೈಪಾಸ್‌ ರಸ್ತೆಯಲ್ಲಿರುವ ಪಾನ್‌‍ ಬೀಡ ಅಂಗಡಿಯಲ್ಲಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿದ ಪುತ್ತೂರು ನಗರ ಪೊಲೀಸ್‌ ಠಾಣಾ ಉಪನಿರೀಕ್ಷಕ ನಂದಕುಮಾರ್‌ಎಂ.ಎಂ. ಹಾಗೂ ಸಿಬಂದಿ ಲಕ್ಷ್ಮಣನನ್ನು ವಿಚಾರಿಸಿ 1,550 ಮೌಲ್ಯದ 31 ಲಾಟರಿ ಹಾಗೂ ಮಾರಾಟ ಮಾಡಿದ ಹಣ 1,100 ರೂ. ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next