Advertisement

Puttur ಕೊಲೆ ಪ್ರಕರಣ: ಮೂರನೇ ಆರೋಪಿ ಬಂಧನ

11:19 PM Dec 13, 2023 | Team Udayavani |

ಪುತ್ತೂರು: ಕುಂಬ್ರದಲ್ಲಿ ಟಿಪ್ಪರ್‌ ಚಾಲಕನಾಗಿದ್ದ ಬಾಗಲಕೋಟೆ ಬಾದಾಮಿ ಡಾಣಕಶಿರೂರು ಮೂಲದ ಹನುಮಂತ ಮಾದರ (22) ಕೊಲೆ ಪ್ರಕರಣದ ಮೂರನೇ ಆರೋಪಿ ದುರ್ಗಪ್ಪ ಮಾದರನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿಯಿಂದ ಅಪಹರಣಕ್ಕೆ ಬಳಸಿದ್ದ ವಾಹನ ಮತ್ತು ಕೊಲೆ ಮಾಡಲು ಬಳಸಲಾಗಿದ್ದ ರಾಡ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ನ. 17ರಂದು ಹನುಮಂತ ಮಾದರನನ್ನು ಕುಂಬ್ರದಿಂದ ಮೂವರು ಸೇರಿ ವಾಹನವೊಂದರಲ್ಲಿ ಕರೆದೊಯ್ದು ಕೊಲೆ ಮಾಡಿ ಮೃತದೇಹವನ್ನು ಆಗುಂಬೆ ಘಾಟಿ ಸಮೀಪ ಎಸೆದು ಹೋಗಿದ್ದರು. ಡಿ. 8ರಂದು ಮೃತದೇಹ ಪತ್ತೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಬಾದಾಮಿ ತಾಲೂಕು ಡಾಣಕಶಿರೂರು ನಿವಾಸಿ ಹನುಮಪ್ಪ ಮಾದರ, ರೋಣ ತಾಲೂಕು ಜಗಳೂರು ಗ್ರಾಮ ಅಂಬೇಡ್ಕರ್‌ ನಗರ ನಿವಾಸಿ ಮಂಜುನಾಥನನ್ನು ಪೊಲೀಸರು ಬಂಧಿಸಿದ್ದರು. ಇನ್ನೋರ್ವ ಆರೋಪಿ ಬೆಳಗಾವಿ ರಾಮದುರ್ಗಾ ಗ್ರಾಮದ ಮನೇನಕೊಪ್ಪ ನಿವಾಸಿ ದುರ್ಗಪ್ಪ ಮಾದರ ಪರಾರಿಯಾಗಿದ್ದ. ಇದೀಗ ಆತನನ್ನೂ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪೆಟ್ರೋಲ್‌ ಪಂಪ್‌ ಒಂದರ ಬಳಿಯಿಂದ ಮತ್ತು ಕೊಲೆ ಮಾಡಲು ಉಪಯೋಗಿಸಿದ ರಾಡ್‌ವೊಂದನ್ನು ಆಗುಂಬೆ ಘಾಟಿಯಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.

Advertisement

ಕೊಲೆ ಆರೋಪಿ ಶಿವಪ್ಪ ಹನುಮಂತ ಮಾದರ ಅವರ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕಾಗಿ ಹನುಮಂತ ಮಾದರ ಅವರ ಕೊಲೆ ನಡೆದಿತ್ತು ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next