Advertisement

Puttur: ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

11:56 PM Oct 10, 2023 | Team Udayavani |

ಪುತ್ತೂರು: ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿಯ ಪಡ್ಪುವಿನಲ್ಲಿ ಅ. 10ರಂದು ಸಂಭವಿಸಿದೆ.

Advertisement

ನಗರದ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿಯ ವೀಕ್ಷಿತ್‌(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪುತ್ತೂರು: ಜ್ವರದಿಂದ ಬಾಲಕಿ ಸಾವು
ಪುತ್ತೂರು: ಶಂಕಿತ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಗರದ ಬೊಳುವಾರಿನ ಬಾಲಕಿಯೋರ್ವಳು ಮೃತಪಟ್ಟ ಘಟನೆ ಅ.9ರಂದು ಸಂಭವಿಸಿದೆ. ಮೂಲತಃ ಸುರತ್ಕಲ್‌ ಕೃಷ್ಣಾಪುರ ನಿವಾಸಿ ನಾಮ್‌ ದೇವ್‌ ಆಚಾರ್ಯ ಅವರ ಪುತ್ರಿ ಸಾನಿಧ್ಯ (8) ಮೃತ ಬಾಲಕಿ.

ಜ್ವರದಿಂದ ಬಳಲುತ್ತಿದ್ದ ಅವಳನ್ನು ಪುತ್ತೂರಿನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆಕೆ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ದು ದಾಖಲಿಸಲಾಗಿತ್ತು. ಅಲ್ಲಿ ಆಕೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next