Advertisement

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

08:45 PM Oct 27, 2024 | Team Udayavani |

ಪುತ್ತೂರು: ಕಡಬ ತಾಲೂಕು ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಬಳಿ 2021ರ ಫೆ. 25ರಂದು ಲಾರಿ ಹಾಗೂ ದೋಸ್ತ್ ವಾಹನ ನಡುವೆ ಢಿಕ್ಕಿ ಸಂಭವಿಸಿ ದೋಸ್ತ್ ವಾಹನ ಚಾಲಕ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಎಚ್‌. ಆರ್‌. ಶಿವಣ್ಣ ಅವರ ಪೀಠ ಲಾರಿ ಚಾಲಕನಿಗೆ 6 ತಿಂಗಳ ಜೈಲು ಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Advertisement

ಹಾಸನ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಮಂಗಳೂರು ಕಡೆಗೆ ಹೋಗುತ್ತಿದ್ದ ದೋಸ್ತ್ ಗಾಡಿ ನಡುವೆ ಈ ಢಿಕ್ಕಿ ಸಂಭವಿಸಿತ್ತು. ಪರಿಣಾಮ ದೋಸ್ತ್ ಗಾಡಿ ಚಾಲಕ ಚೇತನ್‌ ಗಂಭೀರ ಗಾಯಗೊಂಡ ಪರಿಣಾಮ ಮೃತಪಟ್ಟಿದ್ದರು. ಸರಕಾರದ ಪರವಾಗಿ ಅಭಿಯೋಜಕ ಕವಿತಾ ವಾದ ಮಂಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next