Advertisement

Puttur ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

12:02 AM Sep 06, 2023 | Team Udayavani |

ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಬಳಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೆ. 5ರಂದು ನಡೆದಿದೆ.

Advertisement

ಬೆಟ್ಟಂಪಾಡಿ ಗ್ರಾಮದ ಅಂಗರಾಜೆ ಬಾಲೊÂಟ್ಟು ಗುತ್ತು ಸಂಕಯ್ಯ ಆಳ್ವ ಅವರ ಪುತ್ರ ರವೀಂದ್ರನಾಥ ಆಳ್ವ (55) ಈ ಕೃತ್ಯ ಎಸಗಿದವರು. ರವೀಂದ್ರನಾಥ ಅವರು ಮಾನಸಿಕ ಖನ್ನತೆಗೆ ಒಳಗಾಗಿದ್ದು, ಪತ್ನಿ ಹಾಗೂ ಮಕ್ಕಳಿಬ್ಬರು ಬೆದ್ರಾಳದ ತವರು ಮನೆಯಲ್ಲಿ ವಾಸಿಸುತ್ತಿದ್ದರು. ರವೀಂದ್ರನಾಥ ಆಳ್ವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು.

ಪಕ್ಕದ ಸಹೋದರನ ಮನೆಯಲ್ಲಿ ಊಟ ಮಾಡುತ್ತಿದ್ದ ಅವರು ಸೆ. 3ರಂದು ರಾತ್ರಿ ಎಂದಿನಂತೆ ಊಟಕ್ಕೆ ತೆರಳಿ ತಾನು ಮನೆಯಲ್ಲಿ ಊಟ ಮಾಡುವುದಾಗಿ ಬುತ್ತಿ ತೆಗೆದುಕೊಂಡು ಹೋದವರು ಎರಡು ದಿನಗಳಾದರೂ ಬಂದಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಂಗಳವಾರ ಪರಿಶೀಲಿಸಿದಾಗ ಮನೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next