Advertisement

ದಾದಿಯ ನಿರ್ಲಕ್ಷ್ಯದಿಂದ ಮಗು ಸಾವು : ನರ್ಸ್ ಗೆ ತಕ್ಕ ಶಿಕ್ಷೆ ವಿಧಿಸುವಂತೆ ಹೆತ್ತವರ ಆಗ್ರಹ

09:14 PM Mar 29, 2022 | Team Udayavani |

ಪುತ್ತೂರು : ದಾದಿಯೊಬ್ಬಳ ನಿರ್ಲಕ್ಷ್ಯಕ್ಕೆ ಕೆಲವೇ ವಾರದ ಹಿಂದೆ ಜನನವಾಗಿದ್ದ ಮಗು ಸಾವನಪ್ಪಿದ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದೆ.

Advertisement

ಗಣೇಶ್ ಮತ್ತು ಚೈತ್ರ ದಂಪತಿಗಳ ಅನಾರೋಗ್ಯದ ಹಿನ್ನೆಲೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಲಾಗಿತ್ತು. ಆಸ್ಪತ್ರೆಯ ನರ್ಸ್ ಮಗುವಿಗೆ ಮೂರು ಡೋಸ್ ಇಂಜೆಕ್ಷನ್ ನೀಡಿದ್ದು ಅಲ್ಲದೆ, ಮಗುವಿನ ಕಫ ತೆಗೆಯಲು ನೇಬುಲೈಸರ್ ಅಳವಡಿಸಿದ್ದಾರೆ. ಪೈಪು ಸಿಕ್ಕಿಸಿ ಮಗು ಚೀರಿಕೊಂಡು ಅಳುತ್ತಿದ್ದರೂ ಸೀದಾ ನಿರ್ಲಕ್ಷದಿಂದ ಹೊರ ಹೋಗಿದ್ದಾಳೆ ಎಂದು ಮನೆಯವರು ಆರೋಪಿದ್ದಾರೆ.

ಉಸಿರಾಡಲು ಒದ್ದಾಡುತಿದ್ದಂತೆ ಮಗುವಿನಲ್ಲಿ ಚಟುವಟಿಕೆಗಳು ಕಮ್ಮಿಯಾಗಿವೆ. ಮನೆಯವರು ಕೂಡಲೇ ಆಸ್ಪತ್ರೆಯ ಕೌಂಟರ್ ಗೆ ಮಗುವನ್ನು ಎತ್ತಿಕೊಂಡು ಓಡಿದ್ದಾರೆ. ಅಲ್ಲಿ ಮಗುವನ್ನು ಪರೀಕ್ಷಿಸಿದ ಇತರ ನರ್ಸ್ ಗಳು ಮಗು ಸಾವನ್ನಪ್ಪಿದ ವಿಷಯವನ್ನು ಮನೆಯವರಿಗೆ ತಿಳಿಸಿದ್ದಾರೆ. ತಪ್ಪಿತಸ್ಥ ನರ್ಸ್ ಗೆ ತಕ್ಕ ಶಿಕ್ಷೆ ವಿಧಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಇದನ್ನೂ ಓದಿ :ಧರ್ಮಾಪುರದಲ್ಲಿ ಮಾರಮ್ಮದೇವರ ಉತ್ಸವ : ತಂಬಿಟ್ಟು ಆರತಿ ಹೊತ್ತು ಸಾಗಿಬಂದ ಹೆಂಗಳೆಯರು

Advertisement

Udayavani is now on Telegram. Click here to join our channel and stay updated with the latest news.

Next