Advertisement

Puttur: ಸಿಡಿಲು ಬಡಿದು ಹಾನಿ

12:57 AM Oct 21, 2024 | Team Udayavani |

ಪುತ್ತೂರು: ರವಿವಾರ ಸಂಜೆ ಸುರಿದ ಮಳೆಯ ಸಂದರ್ಭ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿ ಉಂಟಾದ ಘಟನೆ ಅರಿಯಡ್ಕ ಗ್ರಾಮದ ಪಾಪೆಮಜಲು ಸಮೀಪದ ಪಾದಲಾಡಿಯಲ್ಲಿ ಸಂಭವಿಸಿದೆ.
ಪಾದಲಾಡಿಯ ಶೇಖರ ಪೂಜಾರಿ ಅವರ ಮನೆಗೆ ಸಿಡಿಲು ಬಡಿದ ಕಾರಣ ಗೋಡೆ ಬಿರುಕು ಬಿಟ್ಟಿದ್ದು ಟಿವಿ, ಫ್ರಿಜ್‌ ಮತ್ತಿತರ ಎಲೆಕ್ಟ್ರಾನಿಕ್‌ ವಸ್ತುಗಳು ಸುಟ್ಟು ಹೋಗಿವೆ. ವಿದ್ಯುತ್‌ ಲೈನ್‌ಗೂ ಹಾನಿಯಾಗಿದೆ. ಅಂಗಳದಲ್ಲಿದ್ದ ಸಾಕು ನಾಯಿ ಸಿಡಿಲಾಘಾತದಲ್ಲಿ ಮೃತಪಟ್ಟಿದೆ. ಸುಮಾರು 50,000 ರೂ.ಗೂ ಅಧಿಕ ನಷ್ಟ ಸಂಭವಿಸಿದೆ.

Advertisement

ದ.ಕ.: ಕೆಲವೆಡೆ ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ರವಿವಾರ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ತುಸು ಮಳೆಯಾಗಿದ್ದು, ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ಪ್ರಕಾರ ಅ.21ರಂದು ಕರಾವಳಿಯಲ್ಲಿ ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಬಂಟ್ವಾಳ, ಪುತ್ತೂರು, ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನಲ್ಲಿಯೂ ಉತ್ತಮ ಮಳೆಯಾಗಿದೆ. ಬೆಳ್ತಂಗಡಿಯ ಕೆಲವೆಡೆ ಸಿಡಿಲಿನ ಆರ್ಭಟವೂ ಜೋರಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next