Advertisement

ಪುತ್ತೂರು : 13 ಕ್ಕೂ ಅಧಿಕ ಮಂದಿಗೆ ಹುಚ್ಚು ನಾಯಿ ಕಡಿತ

09:49 PM May 26, 2022 | Team Udayavani |

ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ ಗುರುವಾರ ಹುಚ್ಚುನಾಯಿಯೊಂದು ಸುಮಾರು 13 ಜನರಿಗೆ ಕಚ್ಚಿದ ಘಟನೆ ಸಂಭವಿಸಿದೆ.

Advertisement

ನೆಹರೂನಗರ, ಬನ್ನೂರು, ಬೊಳುವಾರು, ಬಲಮುರಿ ಮೊದಲಾದ ಪ್ರದೇಶದಲ್ಲಿ ಈ ಹುಚ್ಚುನಾಯಿ ಓಡಾಡಿದ್ದು, ಮೂವರು ಬಾಲಕರು ಸೇರಿದಂತೆ ಸುಮಾರು 13 ಜನರಿಗೆ ಕಚ್ಚಿದೆ.

ಈ ಬಗ್ಗೆ ಮಾಹಿತಿ ಪಡೆದ ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಅವರು ಅಧಿಕಾರಿಗಳಿಗೆ ತುರ್ತು ಆದೇಶ ನೀಡಿ ಕಾರ್ಯಾಚರಣೆಗೆ ಸೂಚಿಸಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ನಾಯಿಯನ್ನು ಸೆರೆ ಹಿಡಿಯಲಾಯಿತು.

ನಗರಸಭೆ ಸದಸ್ಯ ಶಿವರಾಮ ಸಫಲ್ಯ ಮತ್ತಿತರರ ಸಹಕಾರದೊಂದಿಗೆ ನಾಯಿ ಕಡಿತಕ್ಕೆ ಒಳಗಾದವರೆಲ್ಲ ಸರಕಾರಿ ಆಸ್ಪತ್ರೆಗೆ ಬಂದು ರ‍್ಯಾಬಿಸ್ ನಿರೋಧಕ ಚುಚ್ಚುಮದ್ದು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ : ಗ್ರಾಮೀಣ-ಕೃಷಿ ವರದಿಗಾರಿಕೆ ಎಂದರೆ ಸಂಸ್ಕೃತಿ -ಅಭಿವೃದ್ಧಿಯ ಅನಾವರಣ- ಸುನಿಲ್‌ಕುಮಾರ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next