Advertisement

ಪುತ್ತೂರು ಸಂಚಾರಿ ಪೋಲೀಸ್ ಠಾಣಾ ಹೆಡ್ ಕಾನ್ ಸ್ಟೇಬಲ್ ಉಮೇಶ್ ಅಸೌಖ್ಯದಿಂದ ಸಾವು

08:47 AM Jul 23, 2020 | keerthan |

ಪುತ್ತೂರು: ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಮುಪ್ಪೇರ್ಯ ಗ್ರಾಮದ ಉಮೇಶ್ (47) ಅಸೌಖ್ಯದಿಂದ ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Advertisement

ಉಮೇಶ್ ಅವರಿಗೆ 47 ವರ್ಷ ವಯಸ್ಸಾಗಿತ್ತು. ಅಸೌಖ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತರಾಗಿದ್ದಾರೆ.

ಮೃತರು ತಾಯಿ ಶ್ರೀಮತಿ ಕಮಲ, ಪತ್ನಿ ತೀರ್ಥಕುಮಾರಿ, ಓರ್ವ ಪುತ್ರ, ಓರ್ವ ಪುತ್ರಿ, ಸಹೋದರರಾದ ನಿವೃತ್ತ ಎಸ್.ಐ. ಗೋಪಾಲ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆಯ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ, ವಿಠಲ, ಸೀತಾರಾಮ ಪುತ್ತೂರಿನಲ್ಲಿ ಮೆಕ್ಯಾನಿಕ್ ಆಗಿರುವ ಮೋಹನ, ಇಬ್ಬರು ಸಹೋದರಿಯರಾದ ಜಯಂತಿ ಮಡಿಕೇರಿ, ವಿಜಯ ಐವರ್ನಾಡು ಸೇರಿದಂತೆ ಕುಟುಂಬಸ್ಥರು ಬಂಧು ಮಿತ್ರರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next