Advertisement

ಪುತ್ತೂರು : ಹನಿಟ್ರ್ಯಾಪ್‌ ಪ್ರಕರಣ : ಸರ್ವೆ ಬಳಿ ಇಬ್ಬರ ವಶ..?

11:26 AM Jul 05, 2021 | Team Udayavani |

ಪುತ್ತೂರು : ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸವಣೂರು ಸನಿಹದ ಸರ್ವೆ ಬಳಿ ಪೊಲೀಸರು ಸೋಮವಾರ ಬೆಳಗ್ಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭಿಸಿದೆ.

Advertisement

ಬಂಧಿತರನ್ನು ಸವಣೂರಿನ ಅಜರ್, ನಸೀರ್ ಎನ್ನಲಾಗಿದ್ದು ಖಚಿತ ಮಾಹಿತಿ ಮೇರೆಗೆ ಸರ್ವೆ ಸೇತುವೆ ಬಳಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಒಟ್ಟು ನಾಲ್ವರ ಬಂಧನ..!:

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯುವತಿಯನ್ನು ಬಂಧಿಸಲಾಗಿದೆ. ಇಬ್ಬರು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ. ಇದೇ ವೇಳೆ ಇನ್ನೋರ್ವ ಆರೋಪಿ ಕೂಡ ಪೊಲೀಸ್ ವಶ ಆಗಿರುವ ಮಾಹಿತಿ ಲಭಿಸಿದ್ದು ,ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ ಎಂಬ ಮಾಹಿತಿ ಲಭಿಸಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಅಬ್ದುಲ್ ನಾಸೀರ್ (25ವ.) ಅವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದು ಒಟ್ಟು ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next