Advertisement

ಪುತ್ತೂರು: ಕರ್ತವ್ಯದಲ್ಲಿದ್ದ ಬಸ್‌ ನಿರ್ವಾಹಕಿ ಮೇಲೆ ಹಲ್ಲೆ: ಪ್ರಯಾಣಿಕನ ಬಂಧನ

11:32 PM Feb 21, 2023 | Team Udayavani |

ಪುತ್ತೂರು: ಮಂಗಳೂರು- ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರ್ತವ್ಯ ನಿರತರಾಗಿದ್ದ ನಿರ್ವಾಹಕಿ ವಿಜಯಾ ಅವರಿಗೆ ಹಲ್ಲೆಗೈದ ಪ್ರಯಾಣಿಕ ಹಸನ್‌ನನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.

Advertisement

ಫೆ. 20ರಂದು ಸಂಜೆ ಪುತ್ತೂರು ನಿಲ್ದಾಣದಿಂದ ಬಸ್‌ ಹೊರಟು ನಗರದ ಮಾರುಕಟ್ಟೆ ಬಳಿಯ ತಂಗುದಾಣ ತಲುಪಿದಾಗ ಅಂಗವಿಕಲ ಪ್ರಯಾಣಿಕ ರೋರ್ವರಿಗೆ ಸೀಟು ಬಿಟ್ಟುಕೊಡುವಂತೆ ನಿರ್ವಾಹಕಿ ಕೇಳಿದ್ದು, ಆಕ್ಷೇಪಿಸಿದ ಆರೋಪಿಯು ಹಲ್ಲೆ ನಡೆಸಿ ಬಸ್‌ನಿಂದ ಓಡಿ ಪರಾರಿಯಾಗಿದ್ದ.

ನಿರ್ವಾಹಕಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇದೀಗ ಕಾರ್ಯಾಚರಣೆ ನಡೆಸಿದ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿ ಹಸನ್‌ನನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next