Advertisement

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ; ಸವಾರ ಗಂಭೀರ ಗಾಯ

03:06 PM Feb 01, 2023 | Team Udayavani |

ಪುತ್ತೂರು: ಸ್ಕೂಟರ್-ಮಾರುತಿ ವ್ಯಾನ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಹೊರವಲಯದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೋಳ್ಯದಲ್ಲಿ ನಡೆದಿದೆ.

Advertisement

ಪುತ್ತೂರು ದ್ವಾರಕ ಕನ್‌ಸ್ಟ್ರಕ್ಷನ್‌ನ ಶರಣ್ ಗಾಯಗೊಂಡವರು.

ಶರಣ್ ಸೈಟ್ ಇನ್‌ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ಡಿಕ್ಕಿ ಹೊಡೆದಿದ್ದು, ಈ ಪರಿಣಾಮ ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ. ದೇವಿಪ್ರಸಾದ್ ಅವರು ಎಂಬವರು ತನ್ನ ವಾಹನದಲ್ಲಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next