Advertisement

Puttur: ರಸ್ತೆ ಅಪಘಾತ; ಗಾಯಾಳು ಯುವಕ ಸಾವು

09:19 PM Sep 12, 2024 | Team Udayavani |

ಪುತ್ತೂರು: ಬೆಳ್ಳಾರೆ-ಕುಂಬ್ರ ರಸ್ತೆಯ ತ್ಯಾಗರಾಜನಗರದಲ್ಲಿ ಸೆ. 10ರಂದು ತಡರಾತ್ರಿ ಸಂಭವಿಸಿದ ಸ್ಕೂಟರ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡ ಅವರ ಪುತ್ರ ಕೀರ್ತನ್‌ ಗೌಡ (21) ಚಿಕಿತ್ಸೆ ಫಲಕಾರಿಯಾಗದೆ ಸೆ. 11ರಂದು ತಡರಾತ್ರಿ ಮೃತಪಟ್ಟಿದ್ದಾರೆ.

Advertisement

ಅವರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದು, ಗೋ ಪ್ರಮುಖ್‌ ಆಗಿದ್ದರು. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಪುತ್ತೂರಿನಲ್ಲಿ ಶ್ರೀ ಗಣೇಶನ ಶೋಭಾಯಾತ್ರೆಯಲ್ಲಿ ಭಾಗಿಯಾಗಿ ಮನೆಗೆ ಸ್ಕೂಟರ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. ಗಾಯಾಳುವನ್ನು ತತ್‌ಕ್ಷಣ ಪುತ್ತೂರು ಆಸ್ಪತ್ರೆಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next