Advertisement

ಕಾರುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು, ಇಬ್ಬರು ಗಂಭೀರ

08:14 PM Feb 20, 2022 | Team Udayavani |

ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲದಲ್ಲಿ ಕಾರುಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಫೆ.20 ರಂದು ಸಂಭವಿಸಿದೆ.

Advertisement

ಐ-10 ಕಾರು ಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ಚಾಲಕನನ್ನು ಮಡಿಕೇರಿ ಮೂಲದ ರಾಜು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬಿಜೈ ಮೂಲದ ಜ್ಯೋತಿ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ನೇತ್ರಾವತಿ, ಬೇಬಿ ಪೂಜಾರಿ, ಚೇತನ್ ಅವರಿಗೆ ಸಣ್ಣ ಪ್ರಮಾಣದ ಗಾಯ ಉಂಟಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ವಿಫ್ಟ್ ಕಾರಿನ ಚಾಲಕ ಕೈಕಂಬ ಮೂಲದ ಮೊಯಿದ್ದಿನ್ ಕುಂಞಿ ಸಹಿತ ಹಲವರು ಗಾಯಗೊಂಡಿದ್ದಾರೆ. ಬಿಜೈ ಮೂಲದ ಕುಟುಂಬ ತಲಕಾವೇರಿ ತೆರಳಿ ಅಲ್ಲಿಂದ ಮರಳಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಇದನ್ನೂ ಓದಿ : ನಂದಿಬೆಟ್ಟ:ಟ್ರೆಕ್ಕಿಂಗ್ ವೇಳೆ 200 ಅಡಿ ಆಳಕ್ಕೆ ಬಿದ್ದ ಯುವಕ; ಹೆಲಿಕ್ಯಾಪ್ಟರ್ ಬಳಸಿ ರಕ್ಷಣೆ

Advertisement

Udayavani is now on Telegram. Click here to join our channel and stay updated with the latest news.

Next