Advertisement

Puttur ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

10:58 PM Jun 11, 2023 | Team Udayavani |

ಪುತ್ತೂರು : ನಗರದ ಪಡೀಲಿನ ಹಾಸ್ಟೆಲ್ ನಲ್ಲಿ ಕೊಕ್ಕಡದ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.11 ರಂದು ಸಂಭವಿಸಿದೆ.

Advertisement

ಕೊಕ್ಕಡ ಗ್ರಾಮದ ನೇತ್ರಾಳ ನಿವಾಸಿ ಶ್ರೀಧರ ಆಚಾರ್ಯ ಹಾಗೂ ದಿ. ಪುಷ್ಪ ದಂಪತಿ ಪುತ್ರಿ ರೇಖಾ (15) ಆತ್ಮಹತ್ಯೆ ಮಾಡಿಕೊಂಡಾಕೆ.
ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನ ಹೊಂದಿದ್ದರು. ತಂದೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿಯ ನಿಧನದ ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿದ್ದಳು. ಆಕೆ ತಮ್ಮ ಸಂಬಂಧಿಕರ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ ಪಡಿಲ್ ಹಾಸ್ಟೆಲ್‌ಗೆ ಸೇರಿಸಲಾಗಿತ್ತು. ಆರಂಭದಲ್ಲಿ ಹಾಸ್ಟೆಲಿಗೆ ಹೋಗಲು ನಿರಾಕರಿಸಿದ ಆಕೆ ಬಳಿಕ ಹಾಸ್ಟೆಲ್ ಸೇರಲು ಒಪ್ಪಿದ್ದಳು. ಹಾಸ್ಟೆಲ್ ಬೇಡ, ಇಂಗ್ಲೀಷ್ ಕಷ್ಟದ ವಿಷಯ ಎಂದು ಆಗಾಗ ಹೇಳುತ್ತಿದ್ದಳು ಎನ್ನಲಾಗಿದೆ. ಕೊಕ್ಕಡ ಶಾಲೆಯಲ್ಲಿರುವಾಗ ಗೆಳತಿಯರೊಂದಿಗೆ ಉತ್ತಮವಾಗಿ ಬೆರೆತು ಕಲಿಕೆಯಲ್ಲಿ ಆಸಕ್ತಿ ಹೊಂದಿದ್ದಳು.ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next