Advertisement

ಪುತ್ತೂರು ದೇಗುಲ: ವಿಷು ಉತ್ಸವ 

11:30 AM Apr 16, 2018 | Team Udayavani |

ಪುತ್ತೂರು: ಸೌರಯುಗಾದಿ ವಿಷುವಿನ ಅಂಗವಾಗಿ ರವಿವಾರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಒಳಾಂಗಣದಲ್ಲಿ ವಿಷುಕಣಿ ಉತ್ಸವ ಬಲಿ ನಡೆಯಿತು. ಪ್ರಾತಃಕಾಲ ಶ್ರೀ ದೇವರ ಗರ್ಭಗುಡಿಯ ನಡೆ ತೆರೆದು ವಿಷುಕಣಿ ದರ್ಶನದ ಬಳಿಕ ಭಕ್ತರು ಶ್ರೀ ದೇವರನ್ನು ಭೇಟಿಮಾಡಿ ವಿಷು ಕಾಣಿಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಅನಂತರ ದೇವಾಲಯದ ಒಳಾಂಗಣದಲ್ಲಿ ವಿಷು ಕಣಿ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ ನಡೆಯಿತು.

Advertisement

ಸುತ್ತುಗಳ ಆಕರ್ಷಣೆ
ದೇವಾಲಯದಲ್ಲಿ ವಿಶೇಷವಾಗಿ ಮೊದಲಿಗೆ ತಂತ್ರ ಸುತ್ತು, ಅನಂತರ ಉಡಿಕೆ ಸುತ್ತು, ಚೆಂಡೆ ಸುತ್ತಿನ ಬಳಿಕ ವಸಂತ
ಕಟ್ಟೆ ಪೂಜೆ, ಸೇವೆಯ ವಾದ್ಯ ಸುತ್ತುಗಳು, ಶಂಖ, ಜಾಗಟೆ ಸುತ್ತು, ಬ್ಯಾಂಡ್‌ ವಾಲಗ ಸುತ್ತು ಮತ್ತು ಸರ್ವ ವಾದ್ಯ ಸುತ್ತು ನಡೆಯಿತು. ಬಳಿಕ ಶ್ರೀ ದೇವರು ಒಳಗಾಗಿ ಮಹಾ ಪೂಜೆ ನಡೆದು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಮಧ್ಯಾಹ್ನ ವಿಷು ಕಣಿಯ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೌರ ಯುಗಾದಿ ವಿಷುಕಣಿಯು ಜಾತ್ರೆ ಸಂದರ್ಭದಲ್ಲಿಯೇ ಬರುತ್ತದೆ. 

ದೀಪದ ಬಲಿ ವಿಶೇಷ 
ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಬೆಳ್ಳಿ ಮೂಡುವ ಹೊತ್ತಿಗೆ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ. ಪ್ರತಿವರ್ಷ ಎ. 16ರಂದು ಸೂರ್ಯೋದಯಕ್ಕೆ ಮೊದಲು ಈ ಉತ್ಸವ ನಡೆಯುತ್ತದೆ. ದೀಪ ಬಲಿ ಉತ್ಸವ ನಡೆಯುವುದರಿಂದ ದೇವಾಲಯದಲ್ಲಿ ಎ. 16ರಂದು ಜಾತ್ರೆ ಪ್ರಯುಕ್ತ ಬೆಳಗಿನ ಉತ್ಸವ ನಡೆಯುವುದಿಲ್ಲ. ವರ್ಷದಲ್ಲಿ ಒಂದು ದಿನ ಮಾತ್ರ ಅಂದರೆ ಜಾತ್ರೆಯ ಸಂದರ್ಭದ ಎ. 16ರಂದು ಮಾತ್ರ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next