Advertisement

ಪುತ್ತೂರು, ಸುಳ್ಯ: ದೇವರ ದರ್ಶನ ಪಡೆದ ಭಕ್ತ ವೃಂದ

09:11 AM Jun 09, 2020 | mahesh |

ಪುತ್ತೂರು/ಸುಳ್ಯ: ಎರಡೂವರೆ ತಿಂಗಳುಗಳ ಬಳಿಕ ಜೂ. 8ರಂದು ದೇವಾಲಯಗಳಿಗೆ ಭಕ್ತರ ಪ್ರವೇಶಕ್ಕೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಪುತ್ತೂರು ಮತ್ತು ಸುಳ್ಯ ತಾಲೂಕಿನ ವಿವಿಧ ದೇಗುಲಗಳಲ್ಲಿ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.

Advertisement

ಸೀಮಿತ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ್ದು ಕಂಡು ಬಂತು. ಆರೋಗ್ಯ ಸುರಕ್ಷತೆಯ ನಿಟ್ಟಿ ನಲ್ಲಿ ಎಲ್ಲೆಡೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಲಕ್ಷ್ಮೀ ವೆಂಕಟ ರಮಣ ದೇವಾಲಯ, ಉಪ್ಪಿ ನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಕೋಡಿಂಬಾಡಿ ಮಹಿಷಮರ್ದಿನಿ ದೇವಾ ಲಯ, ಸುಳ್ಯ ಚೆನ್ನಕೇಶವ ದೇವಾಲಯ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾ ಲಯ, ಪೆರುವಾಜೆ ಶ್ರೀ ಜಲದುರ್ಗಾ ದೇವಾಲಯ, ಬೆಳ್ಳಾರೆ ಮಹಾಲಿಂಗೇಶ್ವರ ದೇವಾ ಲಯ ಸಹಿತ ಹಲವು ದೇವಾಲಯಗಳಲ್ಲಿ ಭಕ್ತರು ದೇವರ ದರ್ಶನ‌ ಪಡೆದರು.

ಹತ್ತೂರು ಭಕ್ತರ ಪಾಲಿನ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಬೆಳಗ್ಗೆ 5.30ಕ್ಕೆ ದೇವಾಲ ಯದ ಮುಂಭಾಗದ ಬಾಗಿಲನ್ನು ತೆರೆಯಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರ ಸಹಿತ ಪರಿವಾರ ದೇವರುಗಳ ದರ್ಶನ ಗೈದು ಹುಂಡಿಗಳಿಗೆ ಕಾಣಿಕೆ ಸಮರ್ಪಣೆ ಮಾಡಿದರು. ದೇವಾಲಯದ ಮುಂಬಾಗಿಲ ಬಳಿ ಸರದಿ ಸಾಲಿನಲ್ಲಿ ಭಕ್ತರಿಗೆ ಪ್ರವೇಶ ಕಲ್ಪಿಸಲಾಯಿತು.

ಸೇವೆಗಳಿರಲಿಲ್ಲ
ಉಪ್ಪಿನಂಗಡಿ: ದಕ್ಷಿಣ ಕಾಶಿ, ಗಯಾಪದ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನವು ಸೋಮವಾರ ಭಕ್ತರ ಪ್ರವೇಶಕ್ಕೆ ತೆರೆದುಕೊಂಡಿತ್ತಾದರೂ ಶ್ರೀ ದೇವಾಲಯಕ್ಕೆ ಆಗಮಿಸಿದ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿತ್ತು. ಸರಕಾರದ ನಿಯಮಾವಳಿಯಂತೆ ದೇವಾಲಯದಲ್ಲಿ ಪೂಜೆಯನ್ನು ಬಿಟ್ಟು ಯಾವುದೇ ಸೇವಾದಿಗಳನ್ನು ನಡೆಸಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next