Advertisement

Putturu: ವಾರಂಟ್‌ ಆರೋಪಿ ಬಂಧನ

12:09 AM Aug 05, 2024 | Team Udayavani |

ಪುತ್ತೂರು: ವಾರಂಟ್‌ ಆರೋಪಿಯೊಬ್ಬನನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ಪರ್ಪುಂಜ ಎಂಬಲ್ಲಿ ಬಂಧಿಸಿ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ಶಿಕ್ಷಾಧೀನ ಕೈದಿಯಾಗಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಿದೆ.

Advertisement

ಆರೋಪಿ ಒಳಮೊಗ್ರು ಗ್ರಾಮದ ದಿನೇಶ್‌ ಪಿ. ಎಂಬಾತನಿಗೆ ಪ್ರಕರಣವೊಂದರಲ್ಲಿ ಪುತ್ತೂರು ನ್ಯಾಯಾಲಯ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿತ್ತು. ಬಳಿಕ ಆರೋಪಿ ಈ ಕುರಿತು ಉಚ್ಚ ನ್ಯಾಯಾಲಯಕ್ಕೆ ಅಪೀಲು ಅರ್ಜಿ ಸಲ್ಲಿಸಿದ್ದ. ಉಚ್ಚ ನ್ಯಾಯಾಲಯ ವಿಚಾರಣೆ ನಡೆಸಿ ಈತನಿಗೆ ಶಿಕ್ಷೆಯನ್ನು ಖಾಯಂಗೊಳಿಸಿತ್ತು. ಅದರಂತೆ ಆರೋಪಿಯನ್ನು ಬಂಧಿಸುವಂತೆ ನ್ಯಾಯಾಲಯ ವಾರಂಟ್‌ ಹೊರಡಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next