Advertisement

ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ: ಜೆಡಿಎಸ್ ಪಕ್ಷದ ಬಿ ಫಾರಂ ಪಡೆದ ಪಿವಿ ರಾಜಗೋಪಾಲ

01:28 PM Apr 19, 2023 | Team Udayavani |

ಕನಕಗಿರಿ: ಕಳೆದ ಒಂದು ವರ್ಷದಿಂದಲೂ ಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದ ಪಿವಿಆರ್ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ಪಿವಿ ರಾಜಗೋಪಾಲ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದರೂ, ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡು ಜೆಡಿಎಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ‌ ಪಕ್ಷದ ಬಿ ಫಾರಂ ಮಂಗಳವಾರ ಪಡೆದುಕೊಂಡಿದ್ದಾರೆ.

Advertisement

ಬಳಿಕ ಉದಯವಾಣಿ ಜೊತೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಪಿವಿ ರಾಜಗೋಪಾಲ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಸಂಘಟಿಸುವಲ್ಲಿ ಶ್ರಮಿಸಿದ್ದೇನೆ. ಅಲ್ಲದೆ ಉಚಿತ ಸಾಮೂಹಿಕ ವಿವಾಹ, ಉಚಿತ ಅನ್ನ ದಾಸೋಹ ಸೇರಿದಂತೆ ಹಲವಾರು ಸಾಮಾಜಿಕ ಸೇವೆಗಳನ್ನು ಮಾಡುವ ನಿಟ್ಟಿನಲ್ಲಿ ಜನರ ಪ್ರೀತಿಗೆ ಪಾತ್ರನಾಗಿದ್ದೇನೆ.

ಶಾಸಕ ಬಸವರಾಜ ದಢೇಸೂಗೂರು ಆಡಳಿತ ವೈಪಲ್ಯ, ಸೇರಿದಂತೆ ಭ್ರಷ್ಟಾಚಾರ ಆರೋಪಗಳಲ್ಲಿ ಸಿಲುಕಿದ್ದರೂ ಬಿಜೆಪಿ ಪಕ್ಷ ಅವರಿಗೆ ಟಿಕೇಟ್ ನೀಡಿದ್ದು ಸರಿಯಲ್ಲ. ಸಾರ್ವಜನಿಕ, ಹಿತೈಷಿಗಳು, ಕಾರ್ಯಕರ್ತರ ಒತ್ತಾಯದ ಮೇರೆಗೆ ಜೆಡಿಎಸ್ ಪಕ್ಷವನ್ನು ಸೇರಲಾಗಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮಾರ್ಗದರ್ಶನ ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಪಕ್ಷವನ್ನು ಬಲಪಡಿಸುತ್ತೇನೆ.

ನಾಳೆ‌ ಗುರುವಾರ ಬೆಳಗ್ಗೆ ಕಾರ್ಯಕರ್ತರೊಂದಿಗೆ ಚುನಾವಣಾ ಕಚೇರಿಗೆ ತೆರಳಿ ನಾಮ ಪತ್ರ ಸಲ್ಲಿಸಲಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next