Advertisement

Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

01:19 PM Oct 01, 2024 | Team Udayavani |

ಧಾರವಾಡ: ಧಾರವಾಡ ತಾಲೂಕಿನ ನಿಗದಿ ಗ್ರಾಮದ ರೈತರ ಕಬ್ಬಿನ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ.

Advertisement

ನಿಗದಿ ಗ್ರಾಮದ ರೈತ ಸಿದ್ಧಬಸಪ್ಪ ಹಳಿಯಾಳ ಎಂಬ ರೈತ ಅಂಬ್ಲಿಕೊಪ್ಪ ಗ್ರಾಮದ ಹದ್ದಿನಲ್ಲಿ ಕಬ್ಬಿನ ಜಮೀನು ಹೊಂದಿದ್ದು, ಕಬ್ಬಿನ ಸೋಗೆ ಸುಲಿಯುವ ಸಂದರ್ಭದಲ್ಲಿ ಈ ಹೆಬ್ಬಾವು ರೈತನ ಕಣ್ಣಿಗೆ ಬಿದ್ದಿದೆ. ಕೂಡಲೇ ಈ ಮಾಹಿತಿಯನ್ನು ಉರಗ ರಕ್ಷಕ ಯಲ್ಲಪ್ಪ ಜೋಡಳ್ಳಿ ಅವರ ಗಮನಕ್ಕೆ ತಂದಾಗ ಯಲ್ಲಪ್ಪ ಮತ್ತು ಆತನ ಸಂಗಡಿಗರು ಸ್ಥಳಕ್ಕೆ ಹೋಗಿ ಆ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ.

ಅಂದಾಜು 4 ವರ್ಷದ ಹೆಣ್ಣು ಹೆಬ್ಬಾವು ಇದಾಗಿದ್ದು, ಸುಮಾರು 20-25 ಕೆಜಿ ತೂಕದ ಜತೆಗೆ ಆರು ಅಡಿ ಉದ್ದವಿದೆ. ಕಬ್ಬಿನ ಗದ್ದೆಯಲ್ಲಿ ಕಾರ್ಯಾಚರಣೆ ನಡೆಸಿ ಯಲ್ಲಪ್ಪ ಅವರು ಆ ಹೆಬ್ಬಾವನ್ನು ರಕ್ಷಣೆ ಮಾಡಿ ಧಾರವಾಡದ ಅರಣ್ಯ ಇಲಾಖೆಗೆ ತಂದಿದ್ದರು. ಅಲ್ಲಿ ಅರಣ್ಯ ಇಲಾಖೆಯವರ ಆದೇಶದಂತೆ ಆ ಹಾವನ್ನು ಮರಳಿ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇದನ್ನೂ ಓದಿ: Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next