Advertisement

ಸೊರಬ: ಜೋಳದ ಹೊಲದಲ್ಲಿ ಹೆಬ್ಬಾವು ಪ್ರತ್ಯಕ್ಷ

03:13 PM Oct 06, 2022 | Team Udayavani |

ಸೊರಬ: ತಾಲೂಕಿನ ಜೇಡಗೇರಿ ಸಮೀಪದ ಮರವೇರಿದ್ದ ಹೆಬ್ಬಾವನ್ನು ಸೆರೆ ಹಿಡಿದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಘಟನೆ ಆಕ್ಟೋಬರ್‌ 6 ಗುರುವಾರ ನಡೆದಿದೆ.

Advertisement

ಜೇಡಗೇರಿ-ಚೀಲನೂರು ಸಮೀಪದ ಜೋಳದ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲ ನಿಮಿಷಗಳಲ್ಲೇ ಮರವನ್ನೇರಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣದ ಮಾರ್ಕೆಟ್ ರಸ್ತೆಯ ಸ್ನೇಕ್ ಅಯಾಝ್ ಮರವನ್ನೇರಿದ್ದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ.

ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿ, ಹೆಬ್ಬಾವನ್ನು ವೀಕ್ಷಿಸಿದರು. ಉಪವಲಯ ಅರಣ್ಯಾಧಿಕಾರಿ ಪರಶುರಾಮ್ ಅವರ ಸಮ್ಮುಖದಲ್ಲಿ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next