Advertisement

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

12:47 AM Oct 26, 2024 | Team Udayavani |

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದ್ದು ಮಾಜಿ ಶಾಸಕ ಅಜ್ಜಂಫೀರ್‌ ಖಾದ್ರಿ ಸಮಾಧಾನಪಡಿಸಲು ಕ್ಷೇತ್ರಕ್ಕೆ ಆಗಮಿಸಿದ್ದ ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಕೆಲ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ.

Advertisement

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಶಾಸಕ ಅಜ್ಜಂಫೀರ್‌ ಖಾದ್ರಿ ಮನವೊಲಿಸಲು ಸಚಿವ ಜಮೀರ್‌ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್‌ಖಾನ್‌ ಪಠಾಣ ಕಾರಿನಲ್ಲಿ ಹುಲಗೂರಿನಲ್ಲಿರುವ ಖಾದ್ರಿ ಅವರ ಮನೆಗೆ ಹೋಗಿದ್ದರು.

ವಾಪಸ್‌ ಕಳುಹಿಸಿದರು
ಟಿಕೆಟ್‌ ಕೈ ತಪ್ಪಿದ್ದರಿಂದ ಆಕ್ರೋಶ ಗೊಂಡಿರುವ ಖಾದ್ರಿ ಬೆಂಬಲಿಗರು ಕಾರಿನ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳೀಯ ಕಾಂಗ್ರೆಸ್‌ ಮುಖಂಡರು ಜಮೀರ್‌ ಅವರನ್ನು ಪಾರು ಮಾಡಿ ವಾಪಸ್‌ ಕಳುಹಿಸಿದರು.

10 ನಿಮಿಷ ಇರುವಾಗ ಓಡಿ ಬಂದು ನಾಮಪತ್ರ ಸಲ್ಲಿಕೆಯಾಸೀರ್‌ಖಾನ್‌ ಪಠಾಣ್‌ಗೆ ಟಿಕೆಟ್‌ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಸಂಕಷ್ಟ ಎದುರಾಗಿದೆ. ಟಿಕೆಟ್‌ ವಂಚಿತರಾದ ಅಜ್ಜಂಪೀರ್‌ ಖಾದ್ರಿ ಹಾಗೂ ಮಾಜಿ ಸಂಸದ ಮಂಜುನಾಥ ಕುನ್ನೂರ ಕೊನೆ ಕ್ಷಣದಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಅಜ್ಜಂಪೀರ್‌ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸದಂತೆ ತಡೆಯಲು ಸಚಿವ ಜಮೀರ್‌ ಅಹ್ಮದ್‌ ಸಾಕಷ್ಟು ಕಸರತ್ತು ನಡೆಸಿದರೂ ಕೊನೆ ಕ್ಷಣದಲ್ಲಿ ಬೈಕ್‌ನಲ್ಲಿ ಬಂದು ಖಾದ್ರಿ ನಾಮಪತ್ರ ಸಲ್ಲಿಸಿದರು. ಬೈಕ್‌ನಲ್ಲಿ ತಹಸೀಲ್ದಾರ್‌ ಕಚೇರಿಗೆ ಆಗಮಿಸಿದ ಅವರು ಕೇವಲ 10 ನಿಮಿಷ ಸಮಯ ಇದ್ದಿದ್ದರಿಂದ ಓಡೋಡಿ ಹೋಗಿ ಚುನಾವಣಾ ಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಅಲ್ಲದೇ ಮಾಜಿ ಸಂಸದ ಮಂಜುನಾಥ ಕುನ್ನೂರ ಸಹ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ ಅಖಾಡ ಮತ್ತಷ್ಟು ರಂಗೇರಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next