Advertisement

ಕನ್ನಡಿಗರಿಗೆ ಕತಾರ್‌ನಿಂದ ವಿಮಾನ ವ್ಯವಸ್ಥೆ: ಡಿವಿಎಸ್‌

12:22 AM May 11, 2020 | Sriram |

ಬೆಂಗಳೂರು: ಕತಾರ್‌ನಿಂದ ರಾಜ್ಯಕ್ಕೆ ಮರಳಲು 1,053 ಮಂದಿ ನೋಂದಣಿ ಮಾಡಿಕೊಂಡಿದ್ದು, ಅವರನ್ನೆಲ್ಲ ಕ್ವಾರಂಟೈನ್‌ ಮಾಡುವ ವ್ಯವಸ್ಥೆಯಾಗುತ್ತಿದ್ದಂತೆ ವಿಮಾನ ವ್ಯವಸ್ಥೆ ಮಾಡಲಾಗುವುದು. ಅನಿವಾಸಿ ಕನ್ನಡಿಗರು ಧೃತಿಗೆಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಭಯ ನೀಡಿದ್ದಾರೆ.

Advertisement

ಈ ಸಂಬಂಧ ಅವರು ಎರಡು ಟ್ವೀಟ್‌ ಮಾಡಿದ್ದಾರೆ. ಕತಾರ್‌ನಿಂದ ಸ್ವದೇಶಕ್ಕೆ ಮರಳಲು ಸಾವಿರಕ್ಕೂ ಹೆಚ್ಚು ಕನ್ನಡಿಗರು ವಿಮಾನದ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ. ಕರ್ನಾಟಕ ಮೂಲದ ಅಲ್ಲಿನ ವಿವಿಧ ಸಂಘಟನೆಗಳ ಪ್ರತಿನಿಧಿಗಳ ಜತೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಅವರನ್ನೆಲ್ಲ ವಾಪಸ್‌ ಕರೆಸುವ ಬಗ್ಗೆ ಚರ್ಚಿಸಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ಕತಾರ್‌ನಿಂದ ಬೆಂಗಳೂರಿಗೆ ವಾಪಸ್‌ ಬರಲು 460 ಮಂದಿ ಮತ್ತು ಮಂಗಳೂರಿಗೆ ವಾಪಸ್‌ ಆಗಲು 593 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಅವರನ್ನೆಲ್ಲ ಕ್ವಾರಂಟೈನ್‌ ಮಾಡುವ ತಯಾರಿ ಆಗುತ್ತಿದ್ದಂತೆ ವಿಮಾನಗಳ ವ್ಯವಸ್ಥೆ ಕಲ್ಪಿಸಲಾಗುವುದು. ಕನ್ನಡಿಗರೇ ಧೃತಿಗೆಡಬೇಡಿ. ನಿಮ್ಮ ಜತೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next