Advertisement

26 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕ್ವಾರಂಟೈನ್‌: ಬಿಇಒ ಪರಿಶೀಲನೆ

06:45 AM Jul 02, 2020 | Lakshmi GovindaRaj |

ಕುಣಿಗಲ್‌: ಕೋವಿಡ್‌ 19 ಸೋಂಕಿತ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 26 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ನಾಲ್ಕು ಮಂದಿ ಶಿಕ್ಷಕರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ತಿಳಿಸಿದರು.  ಉದಯವಾಣಿ ಜತೆ ಮಾತನಾಡಿದರು.

Advertisement

ತಾಲೂಕಿನ ಅಮೃತೂರು ಹೋಬಳಿಯ ದೊಡ್ಡಕಲ್ಲಹಳ್ಳಿಯ 17 ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಮಂಗಳವಾರ ಕೋವಿಡ್‌ 19 ಸೋಂಕು ಕಾಣಿಸಿಕೊಂಡಿತ್ತು. ಆತನ ಸಂಪರ್ಕದಲ್ಲಿದ್ದ 26  ವಿದ್ಯಾರ್ಥಿ ಗಳನ್ನು ಹೋಂ ಕ್ವಾರಂಟೈನ್‌ ಮಾಡಲು ಉದ್ದೇಶಿಸಲಾಗಿದೆ. ಆದರೆ ಅವರು ಪರೀಕ್ಷೆಯಿಂದ ವಂಚಿತರಾಗಬಾರದೆಂಬ ದಿಸೆಯಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಪರೀಕ್ಷೆಗೆ ಬರುವಾಗ ಹಾಗೂ ಪರೀಕ್ಷೆ ಮುಗಿಸಿಕೊಂಡು ಮನೆಗೆ ಹೋಗುವ ವೇಳೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುವುದು. ಎನ್‌ 95 ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ಹುಲಿಯೂರುದುರ್ಗ ಹಾಗೂ ಇತರೆ ಕಡೆಗಳಲ್ಲಿ ಪರೀಕ್ಷೆಗೆ ಕರ್ತವ್ಯ ನಿರ್ವಹಿಸಿದ ನಾಲ್ವರು ಶಿಕ್ಷಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸೇವೆಯಿಂದ ಬಿಡುಗಡೆಗೊಳಿಸಿ ಹೋಂ ಕ್ವಾರಂಟೈನ್‌ಗೆ ಕಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

Advertisement

Udayavani is now on Telegram. Click here to join our channel and stay updated with the latest news.

Next