Advertisement

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

12:58 PM May 25, 2020 | keerthan |

ದಾವಣಗೆರೆ: ಕ್ವಾರಂಟೈನ್ ನಲ್ಲಿದ್ದು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆಗೆ ಎಂದು ಬಂದಿದ್ದ ವ್ಯಕ್ತಿಯೋರ್ವ ಕಳೆದ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

34 ವರ್ಷದ ಈತ ದಾವಣಗೆರೆ ನಗರದ ಆನೆಕೊಂಡ ಕಂಟೈನ್ಮೆಂಟ್ ಝೋನ್‌ಗೆ ಸಂಬಂಧಿತ ವ್ಯಕ್ತಿಯಾಗಿದ್ದಾನೆ.

ಈತನನ್ನು ರವಿವಾರ ಕ್ವಾರಂಟೈನ್ ಮಾಡಲಾಗಿತ್ತು. ನಿನ್ನೆ ಅವರ ಸ್ವಾಬ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಆದರೆ ರಾತ್ರಿ ವೇಳೆ ಈತ ಜಿಲ್ಲಾಸ್ಪತ್ರೆಯ ಬಾತ್‌ರೂಂನಲ್ಲಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next