Advertisement

ಪ್ರಶ್ನೆ ಪತ್ರಿಕೆ ಸೋರಿಕೆ: ಜಾಮೀನು ನಿರಾಕರಣೆ

11:21 PM Sep 13, 2019 | Team Udayavani |

ಬೆಂಗಳೂರು: 2015-16ನೇ ಸಾಲಿನ ದ್ವಿತೀಯ ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಮೊದಲ ಆರೋಪಿ ಕುಮಾರಸ್ವಾಮಿಗೆ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಈ ಕುರಿತಂತೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಹೋಬಳಿಯ ಕಗ್ಗೆರೆ ಗ್ರಾಮದ ಕುಮಾರಸ್ವಾಮಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯು ನ್ಯಾ. ಬಿ.ಎ.ಪಾಟೀಲ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

Advertisement

ಅಂತೆಯೇ, ಅಧೀನ ನ್ಯಾಯಾಲಯವು ಒಂದು ವರ್ಷದೊಳಗೆ ಪ್ರಕರಣದ ವಿಚಾರಣೆ ಮುಕ್ತಾಯಗೊಳಿಸಬೇಕೆಂದು ನಿರ್ದೇಶನ ನೀಡಿತು. “ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ ಎಂಬ ಕಾರಣಕ್ಕಾಗಿ ಕುಮಾರಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗದು. ಇಂಥವರಿಗೆಲ್ಲಾ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ’ ಎಂದು ನ್ಯಾಯಪೀಠ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next