Advertisement

ಪ್ರಶ್ನೆ ಪತ್ರಿಕೆ ಬಹಿರಂಗ: ಢವಳಗಿ ಪರೀಕ್ಷಾ ಕೇಂದ್ರ ರದ್ದತಿಗೆ ಚಿಂತನೆ

05:53 PM Apr 08, 2022 | Team Udayavani |

ಮುದ್ದೇಬಿಹಾಳ : ತಾಲೂಕಿನ ಢವಳಗಿ ಎಂಬಿಪಿ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡು ಸಾರ್ವಜನಿಕರ ಮೊಬೈಲ್ ನಲ್ಲಿ ಹರಿದಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವರ್ಷ ಆ ಪರೀಕ್ಷಾ ಕೇಂದ್ರ ರದ್ದುಪಡಿಸಿ ಬಿದರಕುಂದಿ ಆರ್ ಎಂಎಸ್ಎ ಆದರ್ಶ ವಿದ್ಯಾಲಯ ಶಾಲೆಗೆ ಬದಲಾಯಿಸಲು ಚಿಂತನೆ ನಡೆದಿದೆ.

Advertisement

ಇಲಾಖೆ ಈ ಕುರಿತು ಅಂತಿಮ ನಿರ್ಣಯ ಕೈಕೊಳ್ಳಲಿದೆ ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜಯಪುರ ಜಿಲ್ಲಾ ನೋಡಲ್ ಅಧಿಕಾರಿ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಗಜಾನನ ಮನ್ನಿಕೇರಿ ಶುಕ್ರವಾರ ಹೇಳಿದ್ದಾರೆ.

ಢವಳಗಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಓರ್ವ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಹಾಲಿ ಪರೀಕ್ಷಾ ಕೇಂದ್ರದ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಅವರ ಜಾಗದಲ್ಲಿ ಬೇರೆಯವರನ್ನು ನಿಯೋಜಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗಿದೆ. ಇಂದು ಪರಿಕ್ಷೆಯನ್ನು ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಲ್ಲಿ ಸುವ್ಯವಸ್ಥಿತವಾಗಿ ನಡೆಸಲಾಗಿದೆ ಎಂದರು.

ಬಿಇಓ ಎಚ್.ಜಿ.ಮಿರ್ಜಿ, ಸಿಪಿಐ ಆನಂದ ವಾಗ್ಮೊಡೆ, ಬಿಆರ್ ಸಿಸಿ ಯು.ಬಿ.ದರಿಕಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next