Advertisement

ರೈಲ್ವೆ ಕಾಮಗಾರಿಗೆ ತ್ವರಿತ ‌ಭೂ ಸ್ವಾಧೀನ: ಸಿಎಸ್‌ ಸೂಚನೆ

04:13 PM Nov 01, 2019 | Suhan S |

ಹಾಸನ: ರೈಲ್ವೆ ಕಾಮಗಾರಿಗಾಗಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ(ಸಿಎಸ್‌) ಟಿ.ಎಂ. ವಿಜಯಭಾಸ್ಕರ್‌ ಅವರು ಸೂಚಿಸಿದರು.

Advertisement

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ರೈಲ್ವೆ ಕಾಮಗಾರಿಗೆ ಸಂಬಂಧಿಸಿದ ಭೂ ಸ್ವಾಧೀನ ಕುರಿತುಒಂದು ವಾರದೊಳಗಾಗಿ ಸ್ವಾಧೀನಕ್ಕೆ ನಿಗದಿಪಡಿಸಿರುವ ಜಾಗವನ್ನುಸಂಬಂಧಿತ ಅಧಿಕಾರಿಗಳ ವ್ಯಾಪ್ತಿಗೆ ಪಡೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಸಭೆಯ ನಂತರ ಅಧಿಕಾರಿಗಳೊಂದಿಗೆ  ಮಾತನಾಡಿದ ಜಿಲ್ಲಾಧಿಕಾರಿ ಆರ್‌. ಗಿರೀಶ್‌, ರೈಲ್ವೇ ಕಾಮಗಾರಿಗಾಗಿ ಗೊತ್ತು ಪಡಿಸಿರುವ ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ತಕರಾರುಗಳಿದ್ದಲ್ಲಿ, ಭೂಮಿಯ ಮಾಲೀಕರನ್ನು ಕರೆದು ಸಂಧಾನ ಸಭೆ ನಡೆಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಬೇಕು ಎಂದು ಸಂಬಂಧಿತ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಗಿರೀಶ್‌ ಅವರು ತಾಕೀತು ಮಾಡಿದರು.

ತಕರಾರುಗಳು ಎದುರಾದರೆ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ಜಾಗವನ್ನು ಸ್ವಾಧೀನಕ್ಕೆ ಪಡೆಯುವಂತೆಯೂ ಸೂಚಿಸಿದರು. ಎಡೀಸಿ ಕವಿತಾ ರಾಜಾರಾಂ, ಜಿಪಂ ಸಿಇಒ ಬಿ.ಎ. ಪರಮೇಶ್‌, ಉಪಭಾಗಾಧಿಕಾರಿಗಳಾದ ನವೀನ್‌ ಭಟ್‌ ಮತ್ತು ಗಿರೀಶ್‌ ನಂದನ್‌, ತಹಶೀಲ್ದಾರ್‌ ಪಾರ್ಥಸಾರಥಿ, ಎಸ್‌ಎಲ್‌ಎಒ ಗಳಾದ ಮಂಜುನಾಥ್‌ ಮತ್ತು ಶ್ರೀನಿವಾಸಗೌಡ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಭಾರ ಹಿರಿಯಭೂ ವಿಜ್ಞಾನಿ ಜಿ. ಶ್ರೀನಿವಾಸ್‌ ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next