Advertisement
ಬೇಸಗೆಯಲ್ಲಿ ನಗರಸಭೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುತ್ತದೆ. ಈ ಹೊತ್ತಿನಲ್ಲಿ ಸರಕಾರದ ನಿಯಮವನ್ನು ಬದಿಗಿಟ್ಟು, ತತ್ಕ್ಷಣ ವಿದ್ಯುತ್ ಸಂಪರ್ಕ ನೀಡಿ ಕುಡಿಯುವ ನೀರಿಗೆ ವ್ಯವಸ್ಥೆ ನೀಡಬೇಕಾಗುತ್ತದೆ. ಕುಡಿಯುವ ನೀರು ಪೂರೈಸುವ ಹಿನ್ನೆಲೆಯಲ್ಲಿ ನಿಯಮಗಳಲ್ಲಿ ಸಡಿಲಿಕೆ ಮಾಡುವಂತೆ ಸರಕಾರವೇ ಆದೇಶ ನೀಡಿದೆ. ಇದರಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಕ್ರಮ ಕೈಗೊಳ್ಳಲಾಗುವುದು
ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ನಾರಾಯಣ ಪೂಜಾರಿ ಮಾತನಾಡಿ, ಪ್ರತಿಯೊಂದು ಕೊಳವೆ ಬಾವಿಯ ವಿದ್ಯುತ್ ಪಂಪ್ಗೆ ಪ್ರತ್ಯೇಕ ಟಿಸಿ ಅಳವಡಿಸಬೇಕೆಂದು ಇಲಾಖೆ ನಿಯಮ ವಿಧಿಸಿದೆ. ಆದ್ದರಿಂದ ಟಿಸಿ ಅಳವಡಿಸದೆ ವಿದ್ಯುತ್ ಸಂಪರ್ಕ ನೀಡುವುದು ಕಷ್ಟಕರ. ಕುಡಿಯುವ ನೀರಿನ ಯೋಜನೆಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ನಗರಸಭಾ ಉಪಾಧ್ಯಕ್ಷ ವಿಶ್ವನಾಥ ಗೌಡ, ಸದಸ್ಯರಾದ ಎಚ್. ಮಹಮ್ಮದ್ ಆಲಿ, ಮುಖೇಶ್ ಕೆಮ್ಮಿಂಜೆ, ನಗರಸಭಾ ಕಾರ್ಯಪಾಲಕ ಅಭಿಯಂತರ ಪುರಂದರ ಎಂ.ಕೆ., ನಗರಸಭಾ ನೀರಿನ ವಿಭಾಗದ ವಸಂತ, ಗುತ್ತಿಗೆದಾರ ಸುಧಾಕರ್ ಉಪಸ್ಥಿತರಿದ್ದರು.
Related Articles
ಹೈಮಾಸ್ಟ್ ದೀಪಕ್ಕೂ ಮೀಟರ್ ಅಳವಡಿಕೆ ಕಡ್ಡಾಯ. ಇದುವರೆಗೆ ಮೀಟರ್ ಸರಬರಾಜು ಆಗದೇ ಇರುವುದರಿಂದ ಸಂಪರ್ಕ ನೀಡಲು ವಿಳಂಬವಾಗಿದೆ. ಮೀಟರ್ ಬಂದ ಕೂಡಲೇ ಈ ದೀಪಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ನಾರಾಯಣ ಪೂಜಾರಿ ಅವರು ತಿಳಿಸಿದರು.
Advertisement