Advertisement

ಖಾಲಿ ಹುದ್ದೆ ನೇಮಕಕ್ಕೆ ಶೀಘ್ರ ಮರು ಅಧಿಸೂಚನೆ

06:45 AM Jan 27, 2018 | Team Udayavani |

ರಾಯಚೂರು: ಶಿಕ್ಷಕರ ನೇಮಕಾತಿ ಪ್ರಕಿಯೆ ಅಂತಿಮ ಹಂತದಲ್ಲಿದ್ದು, ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಕೆಲ
ವಿಷಯಗಳಿಗೆ ನಿರೀಕ್ಷೆಯಷ್ಟು ಅರ್ಜಿ ಬಂದಿಲ್ಲ. ಉಳಿದ ಹುದ್ದೆಗಳ ನೇಮಕಕ್ಕೆ ಶೀಘ್ರದಲ್ಲೇ ಮರು ಅಧಿಸೂಚನೆ
ಹೊರಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವಿರ್‌ ಸೇಠ್ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈ-ಕ ಭಾಗಕ್ಕೆ 4750 ಹುದ್ದೆಗಳನ್ನು ಮೀಸಲಿಡಲಾಗಿತ್ತು. ಆದರೆ, ಕೆಲ ಹುದ್ದೆಗಳಿಗೆ ನಿರೀಕ್ಷಿತ ಮಟ್ಟದ ಅರ್ಜಿಗಳು ಸಲ್ಲಿಕೆಯಾಗಿಲ್ಲ. ಒಂದು ತಿಂಗಳೊಳಗೆ ಶಿಕ್ಷಕರ ನೇಮಕ ಪ್ರಕ್ರಿಯೆ ಮುಗಿಸಲಾಗುವುದು. ಶಿಕ್ಷಕರ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಮುಂಚೆ ಶೇ.15 ಇದ್ದ ಅನುಪಾತವನ್ನು ಶೇ.20ಕ್ಕೆ ಹೆಚ್ಚಿಸಿದ್ದೇವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next