Advertisement

ಅರಣ್ಯ, ಸರಕಾರಿ ಗೋಮಾಳ ಭೂಮಿಯಲ್ಲಿನ ದೇಗುಲ ಜಾಗ ಮಂಜೂರಿಗೆ ಕ್ರಮ: ಸಚಿವ ಆರ್‌. ಅಶೋಕ್‌ 

09:19 PM Feb 13, 2023 | Team Udayavani |

ಬೆಂಗಳೂರು: ಸರಕಾರಿ ಭೂಮಿ, ಗೋಮಾಳ, ಅರಣ್ಯ ಪ್ರದೇಶದಲ್ಲಿ ಬಹು ವರ್ಷದಿಂದ ನಿರ್ಮಾಣಗೊಂಡ ದೇವಸ್ಥಾನಗಳು ಜಾಗ ಬಯಸಿ ಕಾನೂನು ಪ್ರಕಾರ ಅರ್ಜಿ ಸಲ್ಲಿಸಿದರೆ ಸಂಪುಟ ಸಭೆಯಲ್ಲಿ ಚರ್ಚಿಸಿ ಆ ದೇವಸ್ಥಾನಕ್ಕೆ ಜಾಗ ಮಂಜೂರು ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ.

Advertisement

ಪ್ರಶ್ನೋತ್ತರ ಕಲಾಪದಲ್ಲಿ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ, ಕೆಲವು ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು ವೈಯಕ್ತಿಕವಾಗಿ ಮಂಜೂರು ಮಾಡಿಸಿಕೊಳ್ಳುವ ಕೆಲಸ ನಡೆದಿದೆ. ಈ ರೀತಿ ಆಗಬಾರದು ಎಂದರು. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ದೇವಸ್ಥಾನಗಳಿಗೆ ಜಾಗ ಮಂಜೂರು ಮಾಡುವುದಾಗಿ ಹೇಳಿತ್ತು. ಕೆಲವು ಕಡೆಗಳಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾಫಿ, ಅಡಿಕೆ, ಹೂ ತೋಟ ಮಾಡಿಕೊಂಡಿದ್ದಾರೆ. ಆ ದೇವಸ್ಥಾನಗಳಿಗೆ ಜಾಗ ಮಂಜೂರು ಮಾಡಿಕೊಡುವ ಕೆಲಸ ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಅಶೋಕ್‌, ಅರ್ಜಿ ಸಲ್ಲಿಸಿದರೆ ಜಾಗ ಮಂಜೂರು ಮಾಡುವ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next