Advertisement

ಕಾಂಗ್ರೆಸ್‌ಗೆ ನೆಲೆ ಇಲ್ಲದಂತೆ ಮಾಡುತ್ತೇವೆ –ಅಶೋಕ್‌

07:40 PM Oct 27, 2022 | Team Udayavani |

ಕೋಲಾರ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಈಗಾಗಲೇ ಉತ್ತರ ದಕ್ಷಿಣ ಆಗಿದ್ದಾರೆ. ನಾನೊಂದು ತೀರ ನೀನೊಂದು ತೀರ ಎಂಬಂತಾಗಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ತಳವೂರಲು ನಾವು ಬಿಡುವುದಿಲ್ಲ. ಇಡೀ ದೇಶದಲ್ಲಿ ಕಾಂಗ್ರೆಸ್‌ ಪಕ್ಷ ಸರ್ವನಾಶ ಆಗಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ  ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.

Advertisement

ನ.11 ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪುತ್ಥಳಿಯನ್ನು ಪ್ರಧಾನಿ ಮೋದಿ ಅನಾವರಣ ಮಾಡಲಿರುವ ಹಿನ್ನೆಲೆಯಲ್ಲಿ ಕೆಂಪೇಗೌಡರ ರಥಯಾತ್ರೆಗೆ ಸಚಿವರಾದ ಆರ್‌.ಅಶೋಕ್‌, ಅಶ್ವತ್ಥ ನಾರಾಯಣ,  ಮುನಿರತ್ನ ಹಾಗೂ ಸಂಸದ ಮುನಿಸ್ವಾಮಿ  ಚಾಲನೆ ನೀಡಿದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅಶೋಕ್‌, ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆ, ತೋಡೋ ರೀತಿ ಆಗಿದೆ. 224 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯಗೆ ಸೂಕ್ತ ಕ್ಷೇತ್ರವೇ ಇನ್ನೂ ಸಿಕ್ಕಿಲ್ಲ. ಇದರಿಂದಲೇ ಗೊತ್ತಾಗುತ್ತೆ ಅವರು ಎಷ್ಟು ತೊಂದರೆಯಲ್ಲಿದ್ದಾರೆ ಅಂತೆ ಎಂದು ವ್ಯಂಗ್ಯವಾಡಿದರು.

ತಮ್ಮ ಕ್ಷೇತ್ರದಲ್ಲಿಯೇ ಮಲ್ಲಿಕಾರ್ಜುನ ಖರ್ಗೆ ಗೆಲ್ಲೋಕೆ ಆಗಲಿಲ್ಲ, ಇನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಅವರ ಆಯ್ಕೆಯಿಂದ ರಾಜ್ಯದಲ್ಲಿ ಯಾವುದೇ ಪರಿಣಾಮ ಬೀರಲ್ಲ. ರಿಮೋಟ್‌ ಆಗಿ ಅವರು ಕೆಲಸ ಮಾಡ್ತಾರೆ. ಕಾಂಗ್ರೆಸ್‌ನಲ್ಲಿ ಕೆಲವರು ನೆಲೆ ಇಲ್ಲದೆ ಓಡಾಡುತ್ತಿದ್ದಾರೆ. ಮೊದಲು ಒಂದು ಕ್ಷೇತ್ರದಲ್ಲಿ ನೆಲೆ ಕಂಡುಕೊಳ್ಳಲಿ ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next