Advertisement

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

07:28 PM Oct 17, 2021 | Team Udayavani |

ಹೊನ್ನಾಳಿ: ಹೊಸ ಕಲ್ಪನೆಯ ದಿಕ್ಸೂಚಿಯಂತೆ ನಡೆದುಕೊಳ್ಳುವ ಸಿಎಂ ಬಸವರಾಜ ಬೊಮ್ಮಾಯಿ ಅಭಿವೃದ್ಧಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸಿ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.

Advertisement

ನ್ಯಾಮತಿ ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶನಿವಾರ “ಜಿಲ್ಲಾ ಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯ ದಲ್ಲಿ ಕೊರೊನಾದಿಂದ 37,931 ಜನ ಮೃತಪಟ್ಟಿದ್ದಾರೆ.

ಕೊರೊನಾದಿಂದ ಮೃತಪಟ್ಟಿರು ವವರ ಪ್ರತಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ. ಹಾಗೂ ಕೇಂದ್ರದಿಂದ 50 ಸಾವಿರ ರೂ. ಸೇರಿ ಒಟ್ಟು 1.5 ಲಕ್ಷ ರೂ. ಪರಿಹಾರ ವಿತರಿಸಲಾಗು ವುದು. ರಾಜ್ಯದ 923 ವಿವಿಧ ಹಟ್ಟಿ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಮೂಲ ಗುರಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next