Advertisement

ನೆರೆ ನಮಗೆ ಪಾಠ ಕಲಿಸಿದೆ, ಮುಲಾಜಿಲ್ಲದೆ ಒತ್ತುವರಿ ತೆರವು ಮಾಡುತ್ತಿದ್ದೇವೆ: ಅಶೋಕ್

11:27 AM Sep 13, 2022 | Team Udayavani |

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಬಂದ ನೆರೆ ನಮಗೆ ಪಾಠ ಕಲಿಸಿದೆ. ಹೀಗಾಗಿ ಎಷ್ಟೇ ದೊಡ್ಡವರಿದ್ದರೂ ಮುಲಾಜಿಲ್ಲದೆ ತೆರವು ಮಾಡುತ್ತೇವೆ ಎಂದು ಸಚಿವ ಆರ್ ಅಶೋಕ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸರ್ಕಾರಗಳು ಬಹಳ ನಾಟಕ ಮಾಡುತ್ತಿದ್ದರು. ಮಳೆ ನಿಂತ ಬಳಿಕ ತೆರವು ನಿಂತು ಹೋಗುತ್ತಿತ್ತು. ನಮ್ಮ ಇಲಾಖೆ ಪಟ್ಟಿ ರೆಡಿ ಮಾಡಿ ಕೊಟ್ಟಿದ್ದೇವೆ. ಬಿಬಿಎಂಪಿಗೆ ಪಟ್ಟಿ ಕೊಟ್ಟಿದ್ದೇವೆ. ಮುಲಾಜಿಲ್ಲದೆ ಒತ್ತುವರಿ ತೆರವು ಮಾಡುತ್ತಿದ್ದೇವೆ ಎಂದರು.

ಐಟಿಯ 30 ಕಂಪನಿಗಳು ಒತ್ತುವರಿ ಮಾಡಿವೆ. ಬಹಳ ಸಾಚಾ ತರಹ ಮಾತನಾಡುತ್ತಿದ್ದರು. ದೊಡ್ಡವರು ಚಿಕ್ಕವರು ಅಂತ ನೋಡಲ್ಲ. ಕಂದಾಯ ಇಲಾಖೆ, ಬಿಬಿಎಂಪಿ, ಬಿಡಿಎ ಜಂಟಿ ಕಾರ್ಯಚರಣೆ ಮಾಡುತ್ತಿವೆ. ಯಾವುದಕ್ಕೂ ಬಗ್ಗದೆ ಒತ್ತುವರಿ ತೆರವು ಮಾಡುತ್ತೇವೆ ಎಂದು ಅಶೋಕ್ ಹೇಳಿದರು.

ಇದನ್ನೂ ಓದಿ:ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗಲಿದೆ ಮತಾಂತರ ನಿಷೇಧ ಕಾಯಿದೆ

ಬಾಗಮನೆ ಪಾರ್ಕ್ ಗೆ ಯಾವುದೇ ವಿನಯಿತಿ ಕೊಟ್ಟಿಲ್ಲ. ದೊಡ್ಡವರು ಚಿಕ್ಕವರೆಂದು ನೋಡಲ್ಲ. ಕೋರ್ಟ್ ಕೇವಿಯಟ್ ಹಾಕುವ ಬಗ್ಗೆ ಚರ್ಚೆ ಮಾಡುತ್ತೇನೆ. ಸಿಎಂ ಮತ್ತು ಅಡ್ವೋಕೆಟ್ ಜನರಲ್ ಜೊತೆ ಚರ್ಚೆ ಮಾಡುತ್ತೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next