Advertisement

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

11:16 PM Jun 27, 2024 | Team Udayavani |

ಬೆಂಗಳೂರು: ಕೇಂದ್ರ ಸರಕಾರದ ಜತೆಗೆ ಸಂಘರ್ಷಕ್ಕಿಳಿಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿಯಲ್ಲಿ ಸಂಸದರ ಜತೆಗೆ ಕಾಟಾಚಾರದ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗೆ ಸಹಾಯ ಮಾಡುವ ಬುದ್ಧಿ ಇಲ್ಲ, ಆದರೆ ದುಡ್ಡು ಹೊಡೆಯುವ ಬುದ್ಧಿ ಇದೆ. ಜನರು ಸರಕಾರದ ಕಪಾಳಕ್ಕೆ ಬಾರಿಸಬೇಕಿದೆ ಎಂದು ವಿಪಕ್ಷದ ನಾಯಕ ಆರ್‌. ಅಶೋಕ್‌ ವಾಗ್ಧಾಳಿ ನಡೆಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಕೇಂದ್ರ ಸರಕಾರ ನೀಡಿರುವ ಹಣವನ್ನೇ ಖರ್ಚು ಮಾಡಲು ರಾಜ್ಯ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಜನರು ಬೆಲೆ ಏರಿಕೆಗಳಿಗೆ ತಯಾರಾಗಿರಬೇಕು. ಈ ಭ್ರಷ್ಟ, ದುಷ್ಟ ಸರಕಾರದ ವಿರುದ್ಧ ನಾವು ಹೋರಾಟ ಮಾಡಿಯೇ ಒಬ್ಬ ಸಚಿವರನ್ನು ಬೀಳಿಸಿದ್ದೇವೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಬೀಳಿಸುತ್ತೇವೆ ಎಂದರು.

ಪೆಟ್ರೋಲ್‌ ದರ ಏರಿಕೆ, ಹಾಲಿನ ದರ ಏರಿಕೆ, ಸ್ಟಾಂಪ್‌ ಡ್ನೂಟಿ ಸೇರಿದಂತೆ ಎಲ್ಲ ದರ ಏರಿಕೆಗೂ ಕಾಂಗ್ರೆಸ್‌ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಬಡವರು ಕುಡಿಯುವ ಮದ್ಯದ ದರ ಏರಿಸಿ, ಶ್ರೀಮಂತರ ಮದ್ಯಗಳ ದರ ಇಳಿಕೆ ಮಾಡಿದ್ದಾರೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next